ಓದುಗರ ಪತ್ರ
ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ ನೀರು ನಿಂತು ದುರ್ನಾತ ಬೀರುತ್ತಿದೆ. ಪ್ಲಾಸ್ಟಿಕ್ ಕವರ್ಗಳು ಸೇರಿ ಇನ್ನಿತರ ತ್ಯಾಜ್ಯ,ಕಸ ಕಡ್ಡಿಗಳು ಮೋರಿಯಲ್ಲಿ ಬಿದ್ದು ತುಂಬಾ ಕೆಟ್ಟ ವಾಸನೆ ಬರುತ್ತಿರುವುದು ಒಂದೆಡೆಯಾದರೆ, ಚಾಮರಾಜನಗರದ ವಿವಿಧ ಸ್ಥಳಗಳ ಕೆಲ ಮೋರಿಗಳು ಹಾಗೂ ಮೋರಿ ಪಕ್ಕದಲ್ಲಿಯೂ ವಿಪರೀತ ಪ್ರಮಾಣದ ಪ್ಲಾಸ್ಟಿಕ್ ಕವರ್ಗಳು ಮತ್ತು ಕಸವನ್ನು ಹಾಕುತ್ತಿರುವುದರಿಂದ ನಗರದಲ್ಲಿ ಸ್ವಚ್ಛತೆಯೇ ಇಲ್ಲದಂತಾಗಿದೆ. ಜೊತೆಗೆ ನಗರದ ಸೌಂದರ್ಯವೂ ಹಾಳಾಗುತ್ತಿರುವುದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಮಕ್ಕಳು ಸಾಂಕ್ರಾಮಿಕ ರೋಗ – ರುಜಿನಗಳು ಹರಡುವ ಭೀತಿಯಿಂದಲೇ ಬದುಕುವಂತಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಚಾಮರಾಜನಗರದ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ನಗರಸಭೆ ಆಡಳಿತ ಕೂಡಲೇ ಸಾರ್ವಜನಿಕರಲ್ಲಿ ಸ್ವಚ್ಛತೆಯೊಂದಿಗೆ ನಗರದ ಸೌಂದರ್ಯ ಕಾಪಾಡಲು ಜಾಗೃತಿ ಮೂಡಿಸುವ ಮೂಲಕ, ಜಿಲ್ಲಾ ಕೇಂದ್ರದ ಘನತೆಯನ್ನು ಉಳಿಸಲು ಮುಂದಾಗಬೇಕೆಂದು ಮನವಿ.
-ನಾಗೇಶ್, ಮಾನಸಗಂಗೋತ್ರಿ ಮೈಸೂರು
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…