ಓದುಗರ ಪತ್ರ
ಇವಿಎಂ ಬದಲು ಬ್ಯಾಲೆಟ್ ಪೇpರ್ಗಳ ಮೂಲಕ ಮತದಾನ ಮಾಡುವ ವ್ಯವಸ್ಥೆಯನ್ನು ಮರುಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು ಸ್ವಾಗತಾರ್ಹ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಲಿದೆ.
‘ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ಒಪ್ಪಿಕೊಳ್ಳುತ್ತಾರೆ. ಸೋತವರು ಇವಿಎಂಗಳಲ್ಲಿ ದೋಷವಿದೆ ಎಂದು ಆರೋಪಿಸುತ್ತಾರೆ. ಸೋತಾಗ ಆರೋಪಿಸುವುದು ಸಾಮಾನ್ಯ. ಹೀಗಾಗಿ ಇಂಥ ವಾದಗಳನ್ನು ಮಂಡಿಸಲು ಇದು ಸೂಕ್ತ ಜಾಗ ಅಲ್ಲ” ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿರುವುದು ಪ್ರಶಂಸನೀಯ.
ಚುನಾವಣೆಗಳಲ್ಲಿನ ತಾಂತ್ರಿಕ ವ್ಯವಸ್ಥೆಗಳ ಭದ್ರತೆ ಕುರಿತಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರಲ್ಲಿ ಎದ್ದಿರುವ ಸಂದೇಹಗಳು ಹಾಸ್ಯಾಸ್ಪದ ಅನಿಸುತ್ತದೆ. ಚುನಾವಣೆಯಲ್ಲಿ ತಮ್ಮ ಪಕ್ಷ ಗೆದ್ದರೆ ಅದು ನ್ಯಾಯಯುತ ಸೋತರೆ ಇವಿಎಂನಲ್ಲಿ ದೋಷವಿದೆ ಎಂದು ಆರೋಪಿಸುತ್ತಾರೆ. ಇದು ಚುನಾವಣಾ ವ್ಯವಸ್ಥೆಯನ್ನೇ ಅನುಮಾನಿಸಿದಂತಾಗುತ್ತದೆ’ ಎಂದಿರುವ ಸುಪ್ರೀಂ ಕೋರ್ಟ್ ಇವಿಎಂ ಮೂಲಕವೇ ಚುನಾವಣೆಗಳನ್ನು ನಡೆಸುವುದನ್ನೇ ಮುಂದುವರಿಸಲು ಆದೇಶಿಸಿದ್ದು, ಈ ತೀರ್ಪು ಜನರಿಗೆ ಚುನಾವಣಾ ವ್ಯವಸ್ಥೆಯ ಮೇಲೆ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ,
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…