ಓದುಗರ ಪತ್ರ
ಇವಿಎಂ ಬದಲು ಬ್ಯಾಲೆಟ್ ಪೇpರ್ಗಳ ಮೂಲಕ ಮತದಾನ ಮಾಡುವ ವ್ಯವಸ್ಥೆಯನ್ನು ಮರುಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು ಸ್ವಾಗತಾರ್ಹ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಲಿದೆ.
‘ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ಒಪ್ಪಿಕೊಳ್ಳುತ್ತಾರೆ. ಸೋತವರು ಇವಿಎಂಗಳಲ್ಲಿ ದೋಷವಿದೆ ಎಂದು ಆರೋಪಿಸುತ್ತಾರೆ. ಸೋತಾಗ ಆರೋಪಿಸುವುದು ಸಾಮಾನ್ಯ. ಹೀಗಾಗಿ ಇಂಥ ವಾದಗಳನ್ನು ಮಂಡಿಸಲು ಇದು ಸೂಕ್ತ ಜಾಗ ಅಲ್ಲ” ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿರುವುದು ಪ್ರಶಂಸನೀಯ.
ಚುನಾವಣೆಗಳಲ್ಲಿನ ತಾಂತ್ರಿಕ ವ್ಯವಸ್ಥೆಗಳ ಭದ್ರತೆ ಕುರಿತಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರಲ್ಲಿ ಎದ್ದಿರುವ ಸಂದೇಹಗಳು ಹಾಸ್ಯಾಸ್ಪದ ಅನಿಸುತ್ತದೆ. ಚುನಾವಣೆಯಲ್ಲಿ ತಮ್ಮ ಪಕ್ಷ ಗೆದ್ದರೆ ಅದು ನ್ಯಾಯಯುತ ಸೋತರೆ ಇವಿಎಂನಲ್ಲಿ ದೋಷವಿದೆ ಎಂದು ಆರೋಪಿಸುತ್ತಾರೆ. ಇದು ಚುನಾವಣಾ ವ್ಯವಸ್ಥೆಯನ್ನೇ ಅನುಮಾನಿಸಿದಂತಾಗುತ್ತದೆ’ ಎಂದಿರುವ ಸುಪ್ರೀಂ ಕೋರ್ಟ್ ಇವಿಎಂ ಮೂಲಕವೇ ಚುನಾವಣೆಗಳನ್ನು ನಡೆಸುವುದನ್ನೇ ಮುಂದುವರಿಸಲು ಆದೇಶಿಸಿದ್ದು, ಈ ತೀರ್ಪು ಜನರಿಗೆ ಚುನಾವಣಾ ವ್ಯವಸ್ಥೆಯ ಮೇಲೆ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ,
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…