ಡಿ.೧೨ರಂದು ಹೈಕೋರ್ಟ್ ನ್ಯಾಯಮೂರ್ತಿಗಳಾದ, ಕೃಷ್ಣ ಎಸ್. ದೀಕ್ಷಿತ್ ಮತ್ತು ಸಿ.ಎಂ.ಜೋಶಿ ಅವರ ವಿಭಾಗೀಯ ಪೀಠವು ತುಮಕೂರಿನ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ ಬ್ರಹ್ಮೇಶ್ವರಸ್ವಾಮಿ ಮಠಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ನಡೆಸಿ ಅದರ ತೀರ್ಪನ್ನು ಕನ್ನಡದಲ್ಲಿಯೇ ನೀಡಿರುವುದು ಸ್ವಾಗತಾರ್ಹ.
ನ್ಯಾಯಾಂಗ ವ್ಯವಸ್ಥೆಯ ಇತಿಹಾಸದಲ್ಲೇ ಸ್ಥಳೀಯ ಭಾಷೆಯೊಂದರಲ್ಲಿ ತೀರ್ಪು ಪ್ರಕಟವಾಗಿರುವುದು ಇದೇ ಪ್ರಥಮ ಎಂದು ಹೇಳಲಾಗುತ್ತಿದೆ. ಜನ ಸಾಮಾನ್ಯರಿಗೆ ಅರ್ಥವಾಗಲಿ ಎಂಬ ಉದ್ದೇಶದಿಂದ ಕನ್ನಡದಲ್ಲಿಯೇ ತೀರ್ಪು ನೀಡಿದ ಈ ಇಬ್ಬರೂ ನ್ಯಾಯಮೂರ್ತಿಗಳು ಅಭಿನಂದನಾರ್ಹರು. ಪ್ರತಿವರ್ಷ ಡಿ.೧೧ರಂದು ‘ಭಾರತ ಭಾಷಾ ದಿನ‘ವನ್ನಾಗಿ ಆಚರಿಸಲಾಗುತ್ತದೆ. ಇದೇ ತಿಂಗಳಿನಲ್ಲಿ ನ್ಯಾಯಾಲಯವೊಂದು ಸ್ಥಳೀಯ ಭಾಷೆಯಲ್ಲಿಯೇ ತೀರ್ಪು ನೀಡಿರುವುದು ಸ್ಥಳೀಯ ಭಾಷೆಗಳನ್ನು ಗೌರವಿಸುವ ಪರಂಪರೆಗೆ ನಾಂದಿ ಹಾಡಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ನ್ಯಾಯಾಲಯಗಳಲ್ಲಿ ಕನ್ನಡದಲ್ಲಿಯೇ ತೀರ್ಪು ನೀಡುವಂತಾಗಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…