ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ನಡೆದಿದ್ದವು. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಇನ್ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿಲ್ಲ ಎಂದು ತಿಳಿಸಿದ್ದರು. ಮೂಲ ವಿಡಿಯೋವನ್ನು ನೋಡಿದಾಗ ಧನಂಜಯ ಅವರು ಶಾಂತಿ ಸಭೆಯಲ್ಲಿ ಕಾನೂನು, ಸುವ್ಯವಸ್ಥೆಯ ದೃಷ್ಟಿಯಿಂದ ಮಾತನಾಡಿದ್ದಾರೆ. ಇದರಲ್ಲಿ ಯಾವುದೇ ತಪ್ಪುಗಳು ಕಂಡು ಬಂದಿಲ್ಲ.ಯೂಟ್ಯೂಬ್ ಚಾನಲ್ನವರು ಅವರ ಹೇಳಿಕೆಯನ್ನು ತಿರುಚಿರುವುದರಿಂದ ಈ ಅವಾಂತರಕ್ಕೆ ಕಾರಣವಾಗಿದೆ.
ತಾಲ್ಲೂಕಿನ ಎಲ್ಲಾ ಸಮುದಾಯದ ಯುವಕರು, ಯಾವುದೇ ಪ್ರಚೋದನಾತ್ಮಕ ಹೇಳಿಕೆ ನೀಡುವ ವ್ಯಕ್ತಿಗಳ ಮಾತಿಗೆ ಕಿವಿಗೊಡದೆ ಶಾಂತಿಯುತವಾಗಿ ಗಣೇಶೋತ್ಸವವನ್ನು ಆಚರಿಸಬೇಕು.
ಆಲಗೂಡು ಶಿವಕುಮಾರ್, ಮೈಸೂರು ಜಿಲ್ಲಾ ದಸಂಸ ಸಂಚಾಲಕ

