ಮೈಸೂರಿನ ಲಿಂಗದೇವರಕೊಪ್ಪಲು ಗ್ರಾಮದಲ್ಲಿರುವ ಗಾರ್ಮೆಂಟ್ಸ್, ಕಾರ್ಖಾನೆಗಳಿಗೆ ಸುತ್ತಮುತ್ತಲಿನ ಕಾರ್ಮಿಕರು ಬರುತ್ತಾರೆ. ಆದರೆ ಈ ಸ್ಥಳದಲ್ಲಿ ಮೈಸೂರಿನಿಂದ ಮಡಿಕೇರಿ, ಹಾಸನ ಕಡೆಗೆ ತೆರಳುವ ಕರ್ನಾಟಕ ಸಾರಿಗೆ ಬಸ್ಗಳನ್ನು ಗ್ರಾಮದಲ್ಲಿ ನಿಲ್ಲಿಸುತ್ತಿಲ್ಲ.
ಮೈಸೂರಿನ ಸಬ್ ಅರ್ಬನ್ ನಿಲ್ದಾಣದಿಂದ ಹೊರಡುವ ಸಾರಿಗೆ ನಿಗಮದ ಬಸ್ಗಳು ರಾಮಸ್ವಾಮಿ ವೃತ್ತ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ, ಪಡುವಾರಹಳ್ಳಿ, ಬಿ. ಎಂ.ಆಸ್ಪತ್ರೆ, ಹಿನಕಲ್, ಹೂಟಗಳ್ಳಿ, ಬೆಳವಾಡಿ ನಂತರ ಮತ್ತೆ ಈ ಬಸ್ ಗಳು ನಿಲ್ಲುವುದು ಇಲವಾಲದಲ್ಲಿ. ಬೆಳವಾಡಿ ಹಾಗೂ ಇಲವಾಲದ ಮಧ್ಯೆ ಇರುವ ಲಿಂಗದೇವರಕೊಪ್ಪಲು ಗ್ರಾಮದಲ್ಲಿ ಸಾರಿಗೆ ನಿಗಮದ ಬಸ್ಗಳು ನಿಲ್ಲುತ್ತಿಲ್ಲ. ಈ ಗ್ರಾಮದಲ್ಲಿ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯ, ಗೋಕುಲ್ ದಾಸ್ ಹಾಗೂ ಶಾಹಿ ಎಕ್ಸ್ಪೋರ್ಟ್ನ ಗಾರ್ಮೆಂಟ್ಸ್ ಗಳ ಮಹಿಳಾ ಹಾಗೂ ಪುರುಷ ನೌಕರರು ಹಾಗೂ ಇತರ ಪ್ರಯಾಣಿಕರು ಪ್ರತಿನಿತ್ಯ ಪ್ರಯಾಣಿಸುತ್ತಾರೆ. ಅಲ್ಲದೇ ಇದೇ ಗ್ರಾಮದ ಅನತಿ ದೂರದಲ್ಲಿ ನಂಜಮ್ಮ ಜವರೇಗೌಡ ಆಸ್ಪತ್ರೆಗೆ ಬರುವ ರೋಗಿಗಳು ಅವರ ಪಾಲಕರು, ಸೇಂಟ್ ಜೋಸೆಫ್ ಸೆಂಟ್ರಲ್ ಸ್ಕೂಲ್ಗೆ ಬರುವ ವಿದ್ಯಾರ್ಥಿಗಳು ಅವರ ಪೋಷಕರು, ವಿನಾಯಕ ಗಾರ್ಡನ್ ಸಿಟಿಯ ನಿವಾಸಿಗಳು ಅವರ ಸಂಬಂಧಿಕರು ಇಲ್ಲಿಗೆ ಬರುತ್ತಾರೆ. ಆದ್ದರಿಂದ ಸಾರಿಗೆ ನಿಗಮದ ಮೈಸೂರು ವಿಭಾಗೀಯ ನಿಯಂತ್ರಣ ಅಧಿಕಾರಿಗಳು ಲಿಂಗದೇವರ ಕೊಪ್ಪಲು ಗ್ರಾಮದಲ್ಲಿ ಸಾರಿಗೆ ನಿಗಮದ ಬಸ್ಗಳ ನಿಲುಗಡೆಗೆ ಕ್ರಮ ಕೈಗೊಳ್ಳಬೇಕು.
-ಮಂಜುನಾಥ್, ಲಿಂಗದೇವರುಕೊಪ್ಪಲು, ಮೈಸೂರು
ಮೈಸೂರಿನ ಹೆಬ್ಬಾಳು ಬಡಾವಣೆಯ ಸೂರ್ಯಬೇಕರಿ ಸಮೀಪ ಎರಡನೇ ಅಡ್ಡರಸ್ತೆಯ ಬಳಿ ಇರುವ ಚರಂಡಿಯನ್ನು ಕಳೆದ ಎರಡು-ಮೂರು ತಿಂಗಳಿನಿಂದ ಸ್ವಚ್ಛಗೊಳಿಸದೇ ಇರುವುದರಿಂದ…
ಮೈಸೂರಿನ ಲಷ್ಕರ್ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ವೀರನಗೆರೆಯಲ್ಲಿ ೨-೯-೧೯೮೫ ರಂದು ಉಚಿತ ವಾಚನಾಲಯವನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅಂದಿನ…
ಸುತ್ತೂರು ಜಾತ್ರಾ ಮಹೋತ್ಸವ ನಿಜಕ್ಕೂ ಸಾಂಸ್ಕೃತಿಕ ಉತ್ಸವವೇ ಆಗಿದೆ. ಎಲ್ಲ ರೀತಿಯ ಮನರಂಜನೆಗಳ ಜೊತೆಗೆ ಮನೋವಿಕಾಸವನ್ನು ಮೂಡಿಸುವ ವಿಶಿಷ್ಟ ಜಾತ್ರೆ…
ಕೊಂಡೋತ್ಸವಕ್ಕೆ ೫ ಎತ್ತಿನ ಗಾಡಿಗಳಲ್ಲಿ ಖಗ್ಗಲಿ ಸೌದೆ ತಂದ ಗ್ರಾಮಸ್ಥರು ಮೈಸೂರು: ತಾಲ್ಲೂಕಿನ ಜಯಪುರ ಗ್ರಾಮದ ಶ್ರೀ ಜೇಡಿಕಟ್ಟೆ ಮಹದೇಶ್ವರ…
ಎಂ.ಗೂಳೀಪುರ ನಂದೀಶ್ ಕೊಳೆತ ಪದಾರ್ಥಗಳಿಂದ ದುರ್ನಾತ; ಹಲವು ಅಂಗಡಿಗಳು ನಿರುಪಯುಕ್ತ ಯಳಂದೂರು: ಪಟ್ಟಣದ ಕೇಂದ್ರಸ್ಥಾನದಲ್ಲಿನ ಸಂತೆ ಮೈದಾನವು ಮೂಲಸೌಲಭ್ಯಗಳಿಂದ ವಂಚಿತವಾಗಿದೆ.…
ಎಸ್.ಎಸ್.ಭಟ್ ನಂಜನಗೂಡು: ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿನ ಕಲಾ ವೈಭವ ಕಲಾಸಕ್ತರೂ ಸೇರಿದಂತೆ ಎಲ್ಲರ ಮನಸೂರೆಗೊಂಡಿತು. ಅನೇಕ ವರ್ಷಗಳಿಂದ…