Andolana originals

ಓದುಗರ ಪತ್ರ: ಲಿಂಗದೇವರಕೊಪ್ಪಲಿನಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಲಿಂಗದೇವರಕೊಪ್ಪಲು ಗ್ರಾಮದಲ್ಲಿರುವ ಗಾರ್ಮೆಂಟ್ಸ್, ಕಾರ್ಖಾನೆಗಳಿಗೆ ಸುತ್ತಮುತ್ತಲಿನ ಕಾರ್ಮಿಕರು ಬರುತ್ತಾರೆ. ಆದರೆ ಈ ಸ್ಥಳದಲ್ಲಿ ಮೈಸೂರಿನಿಂದ ಮಡಿಕೇರಿ, ಹಾಸನ ಕಡೆಗೆ ತೆರಳುವ ಕರ್ನಾಟಕ ಸಾರಿಗೆ ಬಸ್‌ಗಳನ್ನು ಗ್ರಾಮದಲ್ಲಿ ನಿಲ್ಲಿಸುತ್ತಿಲ್ಲ.

ಮೈಸೂರಿನ ಸಬ್ ಅರ್ಬನ್ ನಿಲ್ದಾಣದಿಂದ ಹೊರಡುವ ಸಾರಿಗೆ ನಿಗಮದ ಬಸ್‌ಗಳು ರಾಮಸ್ವಾಮಿ ವೃತ್ತ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ, ಪಡುವಾರಹಳ್ಳಿ, ಬಿ. ಎಂ.ಆಸ್ಪತ್ರೆ, ಹಿನಕಲ್, ಹೂಟಗಳ್ಳಿ, ಬೆಳವಾಡಿ ನಂತರ ಮತ್ತೆ ಈ ಬಸ್ ಗಳು ನಿಲ್ಲುವುದು ಇಲವಾಲದಲ್ಲಿ. ಬೆಳವಾಡಿ ಹಾಗೂ ಇಲವಾಲದ ಮಧ್ಯೆ ಇರುವ ಲಿಂಗದೇವರಕೊಪ್ಪಲು ಗ್ರಾಮದಲ್ಲಿ ಸಾರಿಗೆ ನಿಗಮದ ಬಸ್‌ಗಳು ನಿಲ್ಲುತ್ತಿಲ್ಲ. ಈ ಗ್ರಾಮದಲ್ಲಿ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯ, ಗೋಕುಲ್ ದಾಸ್ ಹಾಗೂ ಶಾಹಿ ಎಕ್ಸ್‌ಪೋರ್ಟ್‌ನ ಗಾರ್ಮೆಂಟ್ಸ್ ಗಳ ಮಹಿಳಾ ಹಾಗೂ ಪುರುಷ ನೌಕರರು ಹಾಗೂ ಇತರ ಪ್ರಯಾಣಿಕರು ಪ್ರತಿನಿತ್ಯ ಪ್ರಯಾಣಿಸುತ್ತಾರೆ. ಅಲ್ಲದೇ ಇದೇ ಗ್ರಾಮದ ಅನತಿ ದೂರದಲ್ಲಿ ನಂಜಮ್ಮ ಜವರೇಗೌಡ ಆಸ್ಪತ್ರೆಗೆ ಬರುವ ರೋಗಿಗಳು ಅವರ ಪಾಲಕರು, ಸೇಂಟ್ ಜೋಸೆಫ್ ಸೆಂಟ್ರಲ್ ಸ್ಕೂಲ್‌ಗೆ ಬರುವ ವಿದ್ಯಾರ್ಥಿಗಳು ಅವರ ಪೋಷಕರು, ವಿನಾಯಕ ಗಾರ್ಡನ್ ಸಿಟಿಯ ನಿವಾಸಿಗಳು ಅವರ ಸಂಬಂಧಿಕರು ಇಲ್ಲಿಗೆ ಬರುತ್ತಾರೆ. ಆದ್ದರಿಂದ ಸಾರಿಗೆ ನಿಗಮದ ಮೈಸೂರು ವಿಭಾಗೀಯ ನಿಯಂತ್ರಣ ಅಧಿಕಾರಿಗಳು ಲಿಂಗದೇವರ ಕೊಪ್ಪಲು ಗ್ರಾಮದಲ್ಲಿ ಸಾರಿಗೆ ನಿಗಮದ ಬಸ್‌ಗಳ ನಿಲುಗಡೆಗೆ ಕ್ರಮ ಕೈಗೊಳ್ಳಬೇಕು.

 -ಮಂಜುನಾಥ್, ಲಿಂಗದೇವರುಕೊಪ್ಪಲು, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

3 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

4 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

4 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

5 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

6 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

6 hours ago