ಓದುಗರ ಪತ್ರ
ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ ಪ್ರಕರಣ ಅತ್ಯಂತ ಅಮಾನವೀಯವಾದುದು. ಸಂತ್ರಸ್ತ ಮಹಿಳೆ ಬಿಜೆಪಿಯೋ, ಕಾಂಗ್ರೆಸ್ಸೋ ಎನ್ನುವುದು ನಂತರದ ವಿಚಾರ. ಮೊದಲಿಗೆ ಆಕೆ ಮಹಿಳೆ ಎಂಬುದನ್ನು ಮಾನವೀಯ ನೆಲೆಯಲ್ಲಿ ನೋಡಬೇಕು. ಸುತ್ತಲೂ ಮಹಿಳಾ ಪೊಲೀಸರೇ ಇದ್ದರೂ ಅದು ಹೇಗೆ ಇಂತಹ ಅವಾಂತರ ನಡೆಯಿತು? ಪೊಲೀಸ್ ವಾಹನವನ್ನು ಹತ್ತಿಸುವ ಮೊದಲೇ ಆಕೆಯ ವರ್ತನೆಯನ್ನು ಸೂಕ್ಷ್ಮವಾಗಿ ಗ್ರಹಿಸಿದ್ದರೆ, ಪೊಲೀಸರಿಗೆ ವಿವಸದ ಸೂಚನೆ ಸಿಗುತ್ತಿತ್ತು ಅನಿಸುತ್ತದೆ.
ಅದೇನೇ ಇರಲಿ ಪ್ರಕರಣ ನಡೆದುಹೋಗಿದೆ. ಯಾವುದೇ ರಾಜಕೀಯ ಪಕ್ಷ ಇದನ್ನು ಸ್ವಾರ್ಥಕ್ಕಾಗಿ ಬಳಸದೇ ಆ ಮಹಿಳೆಗೆ ನ್ಯಾಯ ಒದಗಿಸಲು ಹೋರಾಟ ನಡೆಸಬೇಕು. ರಾಷ್ಟ್ರೀಯ ಮಹಿಳಾ ಆಯೋಗ ಪ್ರಕರಣವನ್ನು ದಾಖಲಿಸಿಕೊಂಡಿದೆ ಎನ್ನಲಾಗಿದೆ. ಇದರಲ್ಲಿ ಪೂರ್ವಗ್ರಹ ಇಲ್ಲದೆ ತನಿಖೆ ನಡೆಸಲಿ. ತಪ್ಪಿತಸ್ಥರಿಗೆ ಮಾತ್ರವೇ ಶಿಕ್ಷೆಯಾಗಲಿ. ಅದರ ಹೊರತಾಗಿ ಅಮಾಯಕರನ್ನು ಇಲ್ಲಿ ಶಿಕ್ಷಿಸುವುದು ಸರಿಯಲ್ಲ.
-ಜಿ.ಎಂ.ಮಾನ್ಯತಾ, ಸರಸ್ವತಿಪುರಂ, ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…