Andolana originals

ಓದುಗರ ಪತ್ರ: ಬಿಸಿಯೂಟದಲ್ಲಿ ವೈವಿಧ್ಯತೆ ಇರಲಿ

ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳು ಹಸಿದು ಪಾಠ ಕೇಳಬಾರದು ಎಂದು ಸರ್ಕಾರ ಮಧ್ಯಾಹ್ನದ ವೇಳೆ ಅಕ್ಷರ ದಾಸೋಹ ಯೋಜನೆಯಡಿ ಮಕ್ಕಳಿಗೆ ಬಿಸಿಯೂಟ ನೀಡುತ್ತಿದೆ. ಶಾಲೆಗಳಲ್ಲಿ ಮಕ್ಕಳಿಗೆ ಪಾಠದ ಜತೆಗೆ ಸತ್ವಯುತ ಆಹಾರ ದೊರೆಯುವುದರಿಂದ ಕಲಿಕೆಯಲ್ಲಿ ಹೆಚ್ಚು ಲವಲವಿಕೆಯಿಂದ ತೊಡಗಿಸಿಕೊಳ್ಳುವಂತಾಗಿದ್ದು, ಶಾಲೆಯ ದಾಖಲಾತಿ ಹಾಗೂ ಹಾಜರಾತಿ ಪ್ರಮಾಣವೂ ಗಣನೀಯವಾಗಿ ಏರಿಕೆ ಕಂಡಿದೆ. ಇದರೊಂದಿಗೆ ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಊಟದ ಜತೆಗೆ ಮೊಟ್ಟೆ ಹಾಗೂ ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ನೀಡುತ್ತಿರುವುದು ಮಕ್ಕಳಲ್ಲಿನ ಪೌಷ್ಟಿಕಾಂಶದ ಕೊರತೆಯನ್ನು ನೀಗಿಸುತ್ತಿದೆ. ಆದರೆ, ಬಿಸಿಯೂಟದ ಸಾಂಬಾರಿಗೆ ಕೇವಲ ತೊಗರಿಬೇಳೆಯನ್ನು ಮಾತ್ರ ಸರಬರಾಜು ಮಾಡುತ್ತಿದ್ದು, ಇದರಿಂದಾಗಿ ಮಕ್ಕಳು ನಿತ್ಯ ಒಂದೇ ಬಗೆಯ ಸಾಂಬಾರು ಊಟ ಮಾಡುವಂತಾಗಿದ್ದು, ಸರ್ಕಾರ ಬೇಳೆ ಕಾಳುಗಳ ಜತೆಗೆ ಕಡಲೆಕಾಳು, ಅವರೆಕಾಳು, ಹುರುಳಿಕಾಳಿನಂತಹ ಇತರೆ ಕಾಳುಗಳನ್ನೂ ಪೂರೈಕೆ ಮಾಡಿದರೆ ಮಕ್ಕಳಿಗೆ ಹೆಚ್ಚಿನ ಪೌಷ್ಟಿಕಾಂಶ ದೊರೆಯುವ ಜತೆಗೆ ಆಹಾರದಲ್ಲಿ ವೈವಿಧ್ಯತೆಯನ್ನು ಕಾಣಲು ಸಾಧ್ಯವಾಗುತ್ತದೆ. ಸರ್ಕಾರ ಈ ಬಗ್ಗೆ ಚಿಂತಿಸಿ ವಿವಿಧ ಕಾಳುಗಳನ್ನು ಶಾಲೆಗಳಿಗೆ ಪೂರೈಸಲಿ.

ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

 

 

ಆಂದೋಲನ ಡೆಸ್ಕ್

Recent Posts

ಮುಡುಕುತೊರೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಡಾ.ಹೆಚ್.ಸಿ.ಮಹದೇವಪ್ಪ

ತಿ.ನರಸೀಪುರ : ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು…

40 mins ago

ಬಹುರೂಪಿ ಬಾಬಾ ಸಾಹೇಬ್‌ | ಜ.11 ರಿಂದ 18ರವರೆಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು‌…

1 hour ago

ಹೊಸ ವರ್ಷಾಚರಣೆ ಸಂಭ್ರಮ : ಅಹಿತಕರ ಘಟನೆ ತಡೆಗೆ ಸಿಎಂ ಸೂಚನೆ

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

4 hours ago

ಉನ್ನಾವೋ ಅತ್ಯಾಚಾರ ಕೇಸ್:‌ ಆರೋಪಿ ಕುಲದೀಪ್‌ ಸಿಂಗ್‌ ಸೆಂಗರ್‌ ಜಾಮೀನಿಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…

4 hours ago

ರಾಜ್ಯದಲ್ಲಿ ಡ್ರಗ್ಸ್‌ ದಂಧೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…

4 hours ago