ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳು ಹಸಿದು ಪಾಠ ಕೇಳಬಾರದು ಎಂದು ಸರ್ಕಾರ ಮಧ್ಯಾಹ್ನದ ವೇಳೆ ಅಕ್ಷರ ದಾಸೋಹ ಯೋಜನೆಯಡಿ ಮಕ್ಕಳಿಗೆ ಬಿಸಿಯೂಟ ನೀಡುತ್ತಿದೆ. ಶಾಲೆಗಳಲ್ಲಿ ಮಕ್ಕಳಿಗೆ ಪಾಠದ ಜತೆಗೆ ಸತ್ವಯುತ ಆಹಾರ ದೊರೆಯುವುದರಿಂದ ಕಲಿಕೆಯಲ್ಲಿ ಹೆಚ್ಚು ಲವಲವಿಕೆಯಿಂದ ತೊಡಗಿಸಿಕೊಳ್ಳುವಂತಾಗಿದ್ದು, ಶಾಲೆಯ ದಾಖಲಾತಿ ಹಾಗೂ ಹಾಜರಾತಿ ಪ್ರಮಾಣವೂ ಗಣನೀಯವಾಗಿ ಏರಿಕೆ ಕಂಡಿದೆ. ಇದರೊಂದಿಗೆ ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಊಟದ ಜತೆಗೆ ಮೊಟ್ಟೆ ಹಾಗೂ ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ನೀಡುತ್ತಿರುವುದು ಮಕ್ಕಳಲ್ಲಿನ ಪೌಷ್ಟಿಕಾಂಶದ ಕೊರತೆಯನ್ನು ನೀಗಿಸುತ್ತಿದೆ. ಆದರೆ, ಬಿಸಿಯೂಟದ ಸಾಂಬಾರಿಗೆ ಕೇವಲ ತೊಗರಿಬೇಳೆಯನ್ನು ಮಾತ್ರ ಸರಬರಾಜು ಮಾಡುತ್ತಿದ್ದು, ಇದರಿಂದಾಗಿ ಮಕ್ಕಳು ನಿತ್ಯ ಒಂದೇ ಬಗೆಯ ಸಾಂಬಾರು ಊಟ ಮಾಡುವಂತಾಗಿದ್ದು, ಸರ್ಕಾರ ಬೇಳೆ ಕಾಳುಗಳ ಜತೆಗೆ ಕಡಲೆಕಾಳು, ಅವರೆಕಾಳು, ಹುರುಳಿಕಾಳಿನಂತಹ ಇತರೆ ಕಾಳುಗಳನ್ನೂ ಪೂರೈಕೆ ಮಾಡಿದರೆ ಮಕ್ಕಳಿಗೆ ಹೆಚ್ಚಿನ ಪೌಷ್ಟಿಕಾಂಶ ದೊರೆಯುವ ಜತೆಗೆ ಆಹಾರದಲ್ಲಿ ವೈವಿಧ್ಯತೆಯನ್ನು ಕಾಣಲು ಸಾಧ್ಯವಾಗುತ್ತದೆ. ಸರ್ಕಾರ ಈ ಬಗ್ಗೆ ಚಿಂತಿಸಿ ವಿವಿಧ ಕಾಳುಗಳನ್ನು ಶಾಲೆಗಳಿಗೆ ಪೂರೈಸಲಿ.
–ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…