ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳು ಹಸಿದು ಪಾಠ ಕೇಳಬಾರದು ಎಂದು ಸರ್ಕಾರ ಮಧ್ಯಾಹ್ನದ ವೇಳೆ ಅಕ್ಷರ ದಾಸೋಹ ಯೋಜನೆಯಡಿ ಮಕ್ಕಳಿಗೆ ಬಿಸಿಯೂಟ ನೀಡುತ್ತಿದೆ. ಶಾಲೆಗಳಲ್ಲಿ ಮಕ್ಕಳಿಗೆ ಪಾಠದ ಜತೆಗೆ ಸತ್ವಯುತ ಆಹಾರ ದೊರೆಯುವುದರಿಂದ ಕಲಿಕೆಯಲ್ಲಿ ಹೆಚ್ಚು ಲವಲವಿಕೆಯಿಂದ ತೊಡಗಿಸಿಕೊಳ್ಳುವಂತಾಗಿದ್ದು, ಶಾಲೆಯ ದಾಖಲಾತಿ ಹಾಗೂ ಹಾಜರಾತಿ ಪ್ರಮಾಣವೂ ಗಣನೀಯವಾಗಿ ಏರಿಕೆ ಕಂಡಿದೆ. ಇದರೊಂದಿಗೆ ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಊಟದ ಜತೆಗೆ ಮೊಟ್ಟೆ ಹಾಗೂ ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ನೀಡುತ್ತಿರುವುದು ಮಕ್ಕಳಲ್ಲಿನ ಪೌಷ್ಟಿಕಾಂಶದ ಕೊರತೆಯನ್ನು ನೀಗಿಸುತ್ತಿದೆ. ಆದರೆ, ಬಿಸಿಯೂಟದ ಸಾಂಬಾರಿಗೆ ಕೇವಲ ತೊಗರಿಬೇಳೆಯನ್ನು ಮಾತ್ರ ಸರಬರಾಜು ಮಾಡುತ್ತಿದ್ದು, ಇದರಿಂದಾಗಿ ಮಕ್ಕಳು ನಿತ್ಯ ಒಂದೇ ಬಗೆಯ ಸಾಂಬಾರು ಊಟ ಮಾಡುವಂತಾಗಿದ್ದು, ಸರ್ಕಾರ ಬೇಳೆ ಕಾಳುಗಳ ಜತೆಗೆ ಕಡಲೆಕಾಳು, ಅವರೆಕಾಳು, ಹುರುಳಿಕಾಳಿನಂತಹ ಇತರೆ ಕಾಳುಗಳನ್ನೂ ಪೂರೈಕೆ ಮಾಡಿದರೆ ಮಕ್ಕಳಿಗೆ ಹೆಚ್ಚಿನ ಪೌಷ್ಟಿಕಾಂಶ ದೊರೆಯುವ ಜತೆಗೆ ಆಹಾರದಲ್ಲಿ ವೈವಿಧ್ಯತೆಯನ್ನು ಕಾಣಲು ಸಾಧ್ಯವಾಗುತ್ತದೆ. ಸರ್ಕಾರ ಈ ಬಗ್ಗೆ ಚಿಂತಿಸಿ ವಿವಿಧ ಕಾಳುಗಳನ್ನು ಶಾಲೆಗಳಿಗೆ ಪೂರೈಸಲಿ.
–ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…