Andolana originals

ಓದುಗರ ಪತ್ರ: ಅಂತೂ ಕ್ಯಾನ್ಸರ್‌ಗೂ ಬರಲಿದೆ ಲಸಿಕೆ

ವಿಶ್ವದ ಮೊದಲ ಕ್ಯಾನ್ಸರ್ ಲಸಿಕೆಯನ್ನು ರಷ್ಯಾದ ವಿಜ್ಞಾನಿಗಳು ಅಭಿವೃದ್ಧಿಪಡಿಸಿರುವುದು ಸ್ವಾಗತಾರ್ಹ. ಪರೀಕ್ಷೆ ವೇಳೆ ಇದು ಶೇ.೧೦೦ರಷ್ಟು ಸುರಕ್ಷಿತ ಎಂದು ಕಂಡುಬಂದಿದೆ ಎಂದು ಹೇಳಲಾಗಿದೆ. ಆ ದೇಶದ ಫೆಡರಲ್ ಸರ್ಕಾರದ ಒಪ್ಪಿಗೆ ಬಾಕಿ ಇದೆ ಎನ್ನಲಾಗಿದೆ. ‘ಎಂಟಿರೋಮಿಕ್ಸ್’ ಎಂಬ ಹೆಸರಿನ ಈ ಲಸಿಕೆಯನ್ನು ಪೂರ್ವ ಕ್ಲಿನಿಕಲ್ ಟ್ರಯಲ್‌ನಲ್ಲಿ ದೊಡ್ಡ ದೊಡ್ಡ ಟ್ಯೂಮರ್‌ಗಳನ್ನು ಹೊಂದಿರುವ ರೋಗಿಗಳ ಮೇಲೆ ಪ್ರಯೋಗ ಮಾಡಲಾಗಿದ್ದು, ಟ್ಯೂಮರ್‌ಗಳ ಗಾತ್ರವನ್ನು ಕುಗ್ಗಿಸುವಲ್ಲಿ ಮೇಲೆ ಹೇಳಲಾದ ವ್ಯಾಕ್ಸಿನ್ ಯಶಸ್ವಿಯಾಗಿದೆ ಎಂದು ರಷ್ಯಾದ ಫೆಡರಲ್ ಮೆಡಿಕಲ್ ಮತ್ತು ಬಯಾಲಾಜಿಕಲ್ ಏಜೆನ್ಸಿ ತಿಳಿಸಿದೆ ಎಂದು ರಷ್ಯಾದ ವಾರ್ತಾ ಸಂಸ್ಥೆಗಳು ವರದಿ ಮಾಡಿವೆ.

ಇದನ್ನೂ ಓದಿ: ಉಕ್ರೇನ್-ರಷ್ಯಾ ಸಂಘರ್ಷ | ಶಾಂತಿಯುತ ಪರಿಹಾರಕ್ಕೆ ಭಾರತ ಸಿದ್ದ : ಪುಟಿನ್‌ಗೆ ಮೋದಿ ಭರವಸೆ

ಪ್ರತಿವರ್ಷ ವಿಶ್ವದಾದ್ಯಂತ ಕ್ಯಾನ್ಸರ್‌ನಿಂದ ಲಕ್ಷಾಂತರ ರೋಗಿಗಳು ಮರಣ ಹೊಂದುತ್ತಿದ್ದಾರೆ. ಬ್ಲಡ್ ಕ್ಯಾನ್ಸರ್,ಲಿವರ್ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್, ಚರ್ಮ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಗರ್ಭಾಶಯದ ಕ್ಯಾನ್ಸರ್, ಗಂಟಲು ಕ್ಯಾನ್ಸರ್ ಸೇರಿದಂತೆ ವಿವಿಧ ರೀತಿಯ ಕ್ಯಾನ್ಸರ್‌ಗಳಿಂದ ಮನಕುಲ ಬಳಲುತ್ತಿದೆ. ಕ್ಯಾನ್ಸರ್ ಚಿಕಿತ್ಸೆ ಗಾಗಿ ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿದರೂ ಬದುಕುವ ಸಂಭವ ಕಡಿಮೆ. ಈ ಹಿನ್ನೆಲೆಯಲ್ಲಿ ಕ್ಯಾನ್ಸರ್ ಲಸಿಕೆಯನ್ನು ಇಡೀ ವಿಶ್ವವೇ ಬರಮಾಡಿಕೊಳ್ಳಲು ಸಜ್ಜಾಗಿದೆ.

– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

3 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

3 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

4 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

4 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

6 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

7 hours ago