Andolana originals

ಓದುಗರ ಪತ್ರ: ಅಂತೂ ಕ್ಯಾನ್ಸರ್‌ಗೂ ಬರಲಿದೆ ಲಸಿಕೆ

ವಿಶ್ವದ ಮೊದಲ ಕ್ಯಾನ್ಸರ್ ಲಸಿಕೆಯನ್ನು ರಷ್ಯಾದ ವಿಜ್ಞಾನಿಗಳು ಅಭಿವೃದ್ಧಿಪಡಿಸಿರುವುದು ಸ್ವಾಗತಾರ್ಹ. ಪರೀಕ್ಷೆ ವೇಳೆ ಇದು ಶೇ.೧೦೦ರಷ್ಟು ಸುರಕ್ಷಿತ ಎಂದು ಕಂಡುಬಂದಿದೆ ಎಂದು ಹೇಳಲಾಗಿದೆ. ಆ ದೇಶದ ಫೆಡರಲ್ ಸರ್ಕಾರದ ಒಪ್ಪಿಗೆ ಬಾಕಿ ಇದೆ ಎನ್ನಲಾಗಿದೆ. ‘ಎಂಟಿರೋಮಿಕ್ಸ್’ ಎಂಬ ಹೆಸರಿನ ಈ ಲಸಿಕೆಯನ್ನು ಪೂರ್ವ ಕ್ಲಿನಿಕಲ್ ಟ್ರಯಲ್‌ನಲ್ಲಿ ದೊಡ್ಡ ದೊಡ್ಡ ಟ್ಯೂಮರ್‌ಗಳನ್ನು ಹೊಂದಿರುವ ರೋಗಿಗಳ ಮೇಲೆ ಪ್ರಯೋಗ ಮಾಡಲಾಗಿದ್ದು, ಟ್ಯೂಮರ್‌ಗಳ ಗಾತ್ರವನ್ನು ಕುಗ್ಗಿಸುವಲ್ಲಿ ಮೇಲೆ ಹೇಳಲಾದ ವ್ಯಾಕ್ಸಿನ್ ಯಶಸ್ವಿಯಾಗಿದೆ ಎಂದು ರಷ್ಯಾದ ಫೆಡರಲ್ ಮೆಡಿಕಲ್ ಮತ್ತು ಬಯಾಲಾಜಿಕಲ್ ಏಜೆನ್ಸಿ ತಿಳಿಸಿದೆ ಎಂದು ರಷ್ಯಾದ ವಾರ್ತಾ ಸಂಸ್ಥೆಗಳು ವರದಿ ಮಾಡಿವೆ.

ಇದನ್ನೂ ಓದಿ: ಉಕ್ರೇನ್-ರಷ್ಯಾ ಸಂಘರ್ಷ | ಶಾಂತಿಯುತ ಪರಿಹಾರಕ್ಕೆ ಭಾರತ ಸಿದ್ದ : ಪುಟಿನ್‌ಗೆ ಮೋದಿ ಭರವಸೆ

ಪ್ರತಿವರ್ಷ ವಿಶ್ವದಾದ್ಯಂತ ಕ್ಯಾನ್ಸರ್‌ನಿಂದ ಲಕ್ಷಾಂತರ ರೋಗಿಗಳು ಮರಣ ಹೊಂದುತ್ತಿದ್ದಾರೆ. ಬ್ಲಡ್ ಕ್ಯಾನ್ಸರ್,ಲಿವರ್ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್, ಚರ್ಮ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಗರ್ಭಾಶಯದ ಕ್ಯಾನ್ಸರ್, ಗಂಟಲು ಕ್ಯಾನ್ಸರ್ ಸೇರಿದಂತೆ ವಿವಿಧ ರೀತಿಯ ಕ್ಯಾನ್ಸರ್‌ಗಳಿಂದ ಮನಕುಲ ಬಳಲುತ್ತಿದೆ. ಕ್ಯಾನ್ಸರ್ ಚಿಕಿತ್ಸೆ ಗಾಗಿ ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿದರೂ ಬದುಕುವ ಸಂಭವ ಕಡಿಮೆ. ಈ ಹಿನ್ನೆಲೆಯಲ್ಲಿ ಕ್ಯಾನ್ಸರ್ ಲಸಿಕೆಯನ್ನು ಇಡೀ ವಿಶ್ವವೇ ಬರಮಾಡಿಕೊಳ್ಳಲು ಸಜ್ಜಾಗಿದೆ.

– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

6 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

6 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

8 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

20 hours ago