Andolana originals

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ ನಗರಿಯ ಸೌಂದರ್ಯಕ್ಕೆ ಖಾಲಿ ನಿವೇಶನಗಳ ಅಸಮರ್ಪಕ ನಿರ್ವಹಣೆಯು ಕಪ್ಪುಚುಕ್ಕೆಯಂತಾಗಿದೆ. ನಗರದಾದ್ಯಂತ ಇರುವ ಅನೇಕ ಖಾಲಿ ನಿವೇಶನಗಳಲ್ಲಿ ‘ಇದು ನಗರಪಾಲಿಕೆ ಆಸ್ತಿ’, ‘ನಗರಾಭಿವೃದ್ಧಿ ಪ್ರಾಧಿಕಾರದ ಆಸ್ತಿ’ ಅಥವಾ ‘ಖಾಸಗಿ ವ್ಯಕ್ತಿಗಳ ಆಸ್ತಿ’ ಎಂದು ಬೋರ್ಡ್ ಹಾಕಿ ಸುಮ್ಮನೆ ಬಿಡಲಾಗಿದೆ.

ವರ್ಷಾನುಗಟ್ಟಲೆ ಈ ಜಗಗಳು ಖಾಲಿಯೇ ಬಿದ್ದಿರುವುದರಿಂದ ಅಲ್ಲಿ ಕಳೆಗಿಡಗಳು ಬೆಳೆದಿವೆ. ಇದು ವಿಷಜಂತುಗಳ ವಾಸಸ್ಥಾನವಾಗಿ ಮಾರ್ಪಟ್ಟು, ಅಕ್ಕಪಕ್ಕದ ನಿವಾಸಿಗಳ ಹಾಗೂ ರಸ್ತೆಬದಿ ಓಡಾಡುವವರ ನೆಮ್ಮದಿಯನ್ನು ಹಾಳು ಮಾಡುತ್ತಿವೆ. ಇನ್ನೊಂದು ಪ್ರಮುಖವಾದ ಸಮಸ್ಯೆಯನ್ನೂ ಇಲ್ಲಿ ಪ್ರಸ್ತಾಪಿಸಬೇಕಾಗುತ್ತದೆ. ಅದೆಂದರೆ ಇಂದಿನ ದಿನಗಳಲ್ಲಿ ಬಹುತೇಕರ ಮನೆಗಳಲ್ಲಿ ಕಾರು ಇರುವುದು ಸರ್ವೆ ಸಾಮಾನ್ಯ.

ಮನೆಯಲ್ಲಿ ವಾಹನ ನಿಲುಗಡೆಗೆ ಜಗವಿಲ್ಲದೆ ಅನಿವಾರ್ಯವಾಗಿ ರಸ್ತೆಗಳ ಮೇಲೆಯೇ ಕಾರುಗಳನ್ನು ನಿಲುಗಡೆ ಮಾಡಲಾಗುತ್ತಿದೆ. ಇದರಿಂದಾಗಿ ರಸ್ತೆಗಳು ಕಿರಿದಾಗಿ, ಇತರೆ ವಾಹನ ಸವಾರರು ಮತ್ತು ಪಾದಚಾರಿಗಳು ಓಡಾಡುವುದು ಕಷ್ಟವಾಗಿದೆ. ಈ ಗಂಭೀರ ಸಮಸ್ಯೆಗೆ ಮೈಸೂರು ಮಹಾನಗರ ಪಾಲಿಕೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಪರಿಹಾರ ಕಂಡುಕೊಳ್ಳಬೇಕು. ಅದನ್ನು ಕಾರ್ಯರೂಪಕ್ಕೆ ತರಬೇಕು.

ನಿವೇಶನಗಳಲ್ಲಿ ಮನೆ ನಿರ್ಮಿಸುವವರೆಗೆ ಅಥವಾ ಅಧಿಕೃತ ಕಾಮಗಾರಿ ಆರಂಭಿಸುವವರೆಗೆ, ಸಂಬಂಧಪಟ್ಟ ಮಾಲೀಕರು ಅಥವಾ ಪ್ರಾಽಕಾರಗಳು ತಮ್ಮ ಖಾಲಿ ನಿವೇಶನಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸಿ ಕಳೆ ಗಿಡಗಳನ್ನು ತೆರವುಗೊಳಿಸಬೇಕು. ಇದರೊಂದಿಗೆ, ಪ್ರತಿ ನಿವೇಶನಕ್ಕೂ ಕಾಂಪೌಂಡ್ ನಿರ್ಮಿಸಿ, ಸುರಕ್ಷತೆಯ ದೃಷ್ಟಿಯಿಂದ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಸ್ವಚ್ಛಗೊಳಿಸಿ, ಸುರಕ್ಷಿತಗೊಳಿಸಿದ ಈ ನಿವೇಶನಗಳನ್ನು ಹತ್ತಿರದ ನಿವಾಸಿಗಳ ಕಾರು ಹಾಗೂ ಇತರೆ ವಾಹನಗಳ ನಿಲುಗಡೆಗೆ ತಾತ್ಕಾಲಿಕವಾಗಿ ಬಳಸಿಕೊಳ್ಳಲು ಅವಕಾಶ ನೀಡಬೇಕು. ನಿವೇಶನದ ಅಳತೆಗೆ ತಕ್ಕಂತೆ ಎಷ್ಟು ವಾಹನಗಳನ್ನು ನಿಲ್ಲಿಸಬಹುದು ಎಂಬುದನ್ನು ನಿರ್ಧರಿಸಿ, ಕಾರು ಮಾಲೀಕರಿಂದ ತಿಂಗಳ ಬಾಡಿಗೆಯನ್ನು ಪಡೆಯಬಹುದು. ಈ ಬಗ್ಗೆ ಸ್ಥಳೀಯ ಆಡಳಿತ ಯೋಚಿಸ ಬೇಕಾಗಿದೆ.

– ಬಿ. ಗಣೇಶ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

4 mins ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

4 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

4 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

4 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

5 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

5 hours ago