ಓದುಗರ ಪತ್ರ
ತನಗೆ ಮಕ್ಕಳಿಲ್ಲದಿದ್ದರೂ, ರಸ್ತೆ ಬದಿಯಲ್ಲಿ ನೂರಾರು ಮರಗಳನ್ನು ನೆಟ್ಟು ಮಕ್ಕಳಂತೆ ಆರೈಕೆ ಮಾಡಿ, ಬೆಳೆಸಿ ‘ವೃಕ್ಷ ಮಾತೆ’ ಎಂದೇ ಹೆಸರಾಗಿದ್ದ ಶತಾಯುಷಿ ಸಾಲು ಮರದ ತಿಮ್ಮಕ್ಕ (೧೧೪) ನಮ್ಮನ್ನು ಅಗಲಿದ್ದಾರೆ. ಆದರೆ ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ನೆಟ್ಟು ಬೆಳೆಸಿ ಹೋಗಿರುವ ಮರಗಳು ಜನರನ್ನು ಸದಾ ತಣ್ಣಗಿರಿಸುತ್ತವೆ.
ಪರಿಸರಕ್ಕೆ ಕೊಡುಗೆಯ ಹೆಗ್ಗುರುತಾಗಿ ಉಳಿಯುತ್ತವೆ. ಅವರ ಸಾರ್ಥಕ ಕೆಲಸವನ್ನು ಅಜರಾಮರವಾಗಿಸುತ್ತವೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸಾವಿರಾರು ಮರಗಳನ್ನು ಮಕ್ಕಳಂತೆ ಪ್ರೀತಿಯಿಂದ ಬೆಳೆಸಿರುವುದಕ್ಕೆ ಈ ಸಮಾಜ ಅವರ ಋಣದಲ್ಲಿದೆ. ಪದ್ಮಶ್ರೀ ಗೌರವ ಸೇರಿದಂತೆ ಪರಿಸರ ಸಂರಕ್ಷಣೆಗಾಗಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ನೂರಾರು ಪ್ರಶಸ್ತಿಗಳು ಅವರಿಗೆ ಸಂದಿವೆ. ತಿಮ್ಮಕ್ಕ ಅವರ ಪರಿಸರ ಸೇವೆ ಅನುಕರಣೀಯ, ಸದಾ ಸ್ಮರಣೀಯ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…