ಓದುಗರ ಪತ್ರ
ತನಗೆ ಮಕ್ಕಳಿಲ್ಲದಿದ್ದರೂ, ರಸ್ತೆ ಬದಿಯಲ್ಲಿ ನೂರಾರು ಮರಗಳನ್ನು ನೆಟ್ಟು ಮಕ್ಕಳಂತೆ ಆರೈಕೆ ಮಾಡಿ, ಬೆಳೆಸಿ ‘ವೃಕ್ಷ ಮಾತೆ’ ಎಂದೇ ಹೆಸರಾಗಿದ್ದ ಶತಾಯುಷಿ ಸಾಲು ಮರದ ತಿಮ್ಮಕ್ಕ (೧೧೪) ನಮ್ಮನ್ನು ಅಗಲಿದ್ದಾರೆ. ಆದರೆ ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ನೆಟ್ಟು ಬೆಳೆಸಿ ಹೋಗಿರುವ ಮರಗಳು ಜನರನ್ನು ಸದಾ ತಣ್ಣಗಿರಿಸುತ್ತವೆ.
ಪರಿಸರಕ್ಕೆ ಕೊಡುಗೆಯ ಹೆಗ್ಗುರುತಾಗಿ ಉಳಿಯುತ್ತವೆ. ಅವರ ಸಾರ್ಥಕ ಕೆಲಸವನ್ನು ಅಜರಾಮರವಾಗಿಸುತ್ತವೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸಾವಿರಾರು ಮರಗಳನ್ನು ಮಕ್ಕಳಂತೆ ಪ್ರೀತಿಯಿಂದ ಬೆಳೆಸಿರುವುದಕ್ಕೆ ಈ ಸಮಾಜ ಅವರ ಋಣದಲ್ಲಿದೆ. ಪದ್ಮಶ್ರೀ ಗೌರವ ಸೇರಿದಂತೆ ಪರಿಸರ ಸಂರಕ್ಷಣೆಗಾಗಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ನೂರಾರು ಪ್ರಶಸ್ತಿಗಳು ಅವರಿಗೆ ಸಂದಿವೆ. ತಿಮ್ಮಕ್ಕ ಅವರ ಪರಿಸರ ಸೇವೆ ಅನುಕರಣೀಯ, ಸದಾ ಸ್ಮರಣೀಯ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿಯಾದ…
ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ…
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…