ಓದುಗರ ಪತ್ರ
ತನಗೆ ಮಕ್ಕಳಿಲ್ಲದಿದ್ದರೂ, ರಸ್ತೆ ಬದಿಯಲ್ಲಿ ನೂರಾರು ಮರಗಳನ್ನು ನೆಟ್ಟು ಮಕ್ಕಳಂತೆ ಆರೈಕೆ ಮಾಡಿ, ಬೆಳೆಸಿ ‘ವೃಕ್ಷ ಮಾತೆ’ ಎಂದೇ ಹೆಸರಾಗಿದ್ದ ಶತಾಯುಷಿ ಸಾಲು ಮರದ ತಿಮ್ಮಕ್ಕ (೧೧೪) ನಮ್ಮನ್ನು ಅಗಲಿದ್ದಾರೆ. ಆದರೆ ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ನೆಟ್ಟು ಬೆಳೆಸಿ ಹೋಗಿರುವ ಮರಗಳು ಜನರನ್ನು ಸದಾ ತಣ್ಣಗಿರಿಸುತ್ತವೆ.
ಪರಿಸರಕ್ಕೆ ಕೊಡುಗೆಯ ಹೆಗ್ಗುರುತಾಗಿ ಉಳಿಯುತ್ತವೆ. ಅವರ ಸಾರ್ಥಕ ಕೆಲಸವನ್ನು ಅಜರಾಮರವಾಗಿಸುತ್ತವೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸಾವಿರಾರು ಮರಗಳನ್ನು ಮಕ್ಕಳಂತೆ ಪ್ರೀತಿಯಿಂದ ಬೆಳೆಸಿರುವುದಕ್ಕೆ ಈ ಸಮಾಜ ಅವರ ಋಣದಲ್ಲಿದೆ. ಪದ್ಮಶ್ರೀ ಗೌರವ ಸೇರಿದಂತೆ ಪರಿಸರ ಸಂರಕ್ಷಣೆಗಾಗಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ನೂರಾರು ಪ್ರಶಸ್ತಿಗಳು ಅವರಿಗೆ ಸಂದಿವೆ. ತಿಮ್ಮಕ್ಕ ಅವರ ಪರಿಸರ ಸೇವೆ ಅನುಕರಣೀಯ, ಸದಾ ಸ್ಮರಣೀಯ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…