ಓದುಗರ ಪತ್ರ
ತನಗೆ ಮಕ್ಕಳಿಲ್ಲದಿದ್ದರೂ, ರಸ್ತೆ ಬದಿಯಲ್ಲಿ ನೂರಾರು ಮರಗಳನ್ನು ನೆಟ್ಟು ಮಕ್ಕಳಂತೆ ಆರೈಕೆ ಮಾಡಿ, ಬೆಳೆಸಿ ‘ವೃಕ್ಷ ಮಾತೆ’ ಎಂದೇ ಹೆಸರಾಗಿದ್ದ ಶತಾಯುಷಿ ಸಾಲು ಮರದ ತಿಮ್ಮಕ್ಕ (೧೧೪) ನಮ್ಮನ್ನು ಅಗಲಿದ್ದಾರೆ. ಆದರೆ ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ನೆಟ್ಟು ಬೆಳೆಸಿ ಹೋಗಿರುವ ಮರಗಳು ಜನರನ್ನು ಸದಾ ತಣ್ಣಗಿರಿಸುತ್ತವೆ.
ಪರಿಸರಕ್ಕೆ ಕೊಡುಗೆಯ ಹೆಗ್ಗುರುತಾಗಿ ಉಳಿಯುತ್ತವೆ. ಅವರ ಸಾರ್ಥಕ ಕೆಲಸವನ್ನು ಅಜರಾಮರವಾಗಿಸುತ್ತವೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸಾವಿರಾರು ಮರಗಳನ್ನು ಮಕ್ಕಳಂತೆ ಪ್ರೀತಿಯಿಂದ ಬೆಳೆಸಿರುವುದಕ್ಕೆ ಈ ಸಮಾಜ ಅವರ ಋಣದಲ್ಲಿದೆ. ಪದ್ಮಶ್ರೀ ಗೌರವ ಸೇರಿದಂತೆ ಪರಿಸರ ಸಂರಕ್ಷಣೆಗಾಗಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ನೂರಾರು ಪ್ರಶಸ್ತಿಗಳು ಅವರಿಗೆ ಸಂದಿವೆ. ತಿಮ್ಮಕ್ಕ ಅವರ ಪರಿಸರ ಸೇವೆ ಅನುಕರಣೀಯ, ಸದಾ ಸ್ಮರಣೀಯ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…