Andolana originals

ಓದುಗರ ಪತ್ರ: ಬೇಸಿಗೆ ಶಿಬಿರವನ್ನು ಹೀಗೂ ನಡೆಸಬಹುದು

ಬೇಸಿಗೆ ರಜೆ ಆರಂಭಗೊಳ್ಳುತ್ತಿದ್ದಂತೆಯೇ ಎಲ್ಲೆಡೆ ಬೇಸಿಗೆ ಶಿಬಿರಗಳೂ ಆರಂಭಗೊಳ್ಳುತ್ತವೆ. ಮಕ್ಕಳು ಪಠ್ಯ-ಪುಸ್ತಕಗಳನ್ನು ಬದಿಗಿಟ್ಟು, ಬೇಸಿಗೆ ಶಿಬಿರದಲ್ಲಿ ಪಾಲ್ಗೊಳ್ಳುವ ಮೂಲಕ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಾರೆ.

ಬೇಸಿಗೆ ಶಿಬಿರಗಳಲ್ಲಿ ಮಕ್ಕಳು ತಮ್ಮ ರಜೆ ದಿನಗಳನ್ನು ಸಂತೋಷದಿಂದ ಕಳೆದರೆ, ದುಡಿಯುವ ಪೋಷಕರಿಗೆ ತಮ್ಮ ಮಕ್ಕಳು ಸುರಕ್ಷಿತವಾಗಿದ್ದಾರೆ ಎಂಬ ಧೈರ್ಯವಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಪರಸ್ಪರ ದ್ವೇಷ, ಕಳ್ಳತನ, ವಂಚನೆ, ಅತ್ಯಾಚಾರ, ಕೊಲೆ ಪ್ರಕರಣಗಳೇ ಹೆಚ್ಚಾಗಿದ್ದು, ಸಮು ದಾಯಗಳ ನಡುವೆ ದ್ವೇಷ ಹೆಚ್ಚಾಗುತ್ತಿದೆ. ಆದ್ದರಿಂದ ಬೇಸಿಗೆ ಶಿಬಿರಗಳಲ್ಲಿ ಮಕ್ಕಳಿಗೆ ಜೀವನ ಮೌಲ್ಯಗಳು, ಸಂಬಂಧಗಳು, ರಕ್ತದಾನ, ದೇಶಪ್ರೇಮ, ಹುತಾತ್ಮ ಯೋಧರ ಬಗ್ಗೆ ಮಾಹಿತಿ, ಗುರುಗಳ ಮಹತ್ವ ತಿಳಿಸುವುದು, ಎಲ್ಲ ಧರ್ಮಗಳು ಮತ್ತು ಆಚರಣೆಗಳನ್ನು ಗೌರವಿಸುವ ವಿಚಾರಗಳು, ಹೆಣ್ಣು ಮಕ್ಕಳನ್ನು ಗೌರವಿಸುವುದು ಹೀಗೆ ಸಾಮಾಜಿಕ ಕಳಕಳಿಯ ವಿಚಾರಗಳನ್ನು ತಿಳಿಸುವ ಜತೆಗೆ ಪರಸ್ಪರ ಕಾಳಜಿಯನ್ನೂ ಮೂಡಿಸಬೇಕು.

ಇವುಗಳೊಂದಿಗೆ ಮಕ್ಕಳು ನಾಟಕ, ಹಾಡುಗಾರಿಕೆ, ಚಿತ್ರಕಲೆ ಹೀಗೆ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು. ಇಂತಹ ಬೆಳವಣಿಗಳು ಬೇಸಿಗೆ ಶಿಬಿರದಲ್ಲಿ ಆದಾಗ ಮಾತ್ರ ಮಕ್ಕಳು ಸಂತೋಷದಿಂದ ಬೇಸಿಗೆ ಶಿಬಿರದಲ್ಲಿ ಭಾಗವಹಿಸುತ್ತಾರೆ.

-ಎಂ.ಎಸ್.ಉಷಾ ಪ್ರಕಾಶ್, ಎಸ್‌ಬಿಎಂ ಕಾಲೋನಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

47 mins ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

49 mins ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

50 mins ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

52 mins ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

56 mins ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

1 hour ago