ಬೀದರ್ನ ಭಾಲ್ಕಿ ತಾಲ್ಲೂಕಿನಲ್ಲಿ ಬಸವಣ್ಣನವರ ಪ್ರತಿಮೆಯನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದು ಖಂಡನೀಯ.
೧೨ನೇ ಶತಮಾನದಲ್ಲಿ ತತ್ವಜ್ಞಾನಿಯಾಗಿ, ಸಾಂಸ್ಕೃತಿಕ ನಾಯಕನಾಗಿ ಹೊರಹೊಮ್ಮಿದ ಬಸವಣ್ಣನವರು ಲಿಂಗ ಸಮಾನತೆ ಹಾಗೂ ಜಾತಿ ಪದ್ಧತಿಯ ವಿರುದ್ಧ ಹೋರಾಡಿ ಸಮಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದವರಲ್ಲಿ ಪ್ರಮುಖರು.
ಅಸಂಖ್ಯಾತ ವಚನಗಳ ಮೂಲಕ ಸಮಾನತೆಯ ಸಂದೇಶವನ್ನು ಸಾರಿದವರು ಬಸವಣ್ಣ. ಇಂತಹ ಮಹಾನ್ ಚೇತನ ಬಸವಣ್ಣನವರ ಪ್ರತಿಮೆಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ. ಇದರಿಂದ ಬಸವಣ್ಣನವರ ಅನುಯಾಯಿಗಳಿಗೆ ಹಾಗೂ ಲಿಂಗಾಯತ ಸಮಾಜಕ್ಕೆ ನೋವುಂಟಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿಯೂ ಇಂತಹದ್ದೇ ಘಟನೆ ವರದಿಯಾಗಿತ್ತು. ಬೆಂಗಳೂರಿನಲ್ಲಿ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ ಪ್ರತಿಮೆಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದರು.
ಇಂತಹ ಘಟನೆಗಳು ಮರುಕಳಿಸುತ್ತಿರುವುದು ಒಂದು ಸಮುದಾಯದ ಭಾವನೆಗೆ ಧಕ್ಕೆಯುಂಟು ಮಾಡುತ್ತಿದೆ. ಸರ್ಕಾರ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕದಿದ್ದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತದೆ. ಆದ್ದರಿಂದ ಸರ್ಕಾರ ಕೂಡಲೇ ಪ್ರತಿಮೆಯನ್ನು ವಿರೂಪಗೊಳಿಸಿದ ಕಿಡಿಗೇಡಿಗಳನ್ನು ಬಂಽಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.
–ಮಹಾಂತೇಶ್ ಬಳ್ಳೂರುಹುಂಡಿ, ಸಂಘಟನಾ ಕಾರ್ಯದರ್ಶಿ, ಅ.ಭಾ.ವಿ. ಲಿ.ಮಹಾಸಭಾ, ನಂಜನಗೂಡು ತಾ
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…