Andolana originals

ಓದುಗರ ಪತ್ರ: ಅಭಿಮಾನವಿರಲಿ, ಅಂಧಾಭಿಮಾನ ಬೇಡ

೧೮ ವರ್ಷಗಳ ಬಳಿಕ ಆರ್ಸಿಬಿ ತಂಡ ಐಪಿಎಲ್ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಈ ಸಂಭ್ರಮ ಕೆಲವೇ ಗಂಟೆಗಳಲ್ಲಿ ಶೋಕವಾಗಿ ಮಾರ್ಪಟ್ಟಿದ್ದು ವಿಪರ್ಯಾಸ. ಮಂಗಳವಾರ ರಾತ್ರಿ ಆರ್ಸಿಬಿ ಗೆದ್ದ ಖುಷಿಯಲ್ಲಿ ಅಭಿಮಾನಿಗಳು ಸಂಭ್ರಮಿಸಿದರು.

ಬುಧವಾರ ವಿಜಯೋತ್ಸವ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ೧೧ ಜನರ ಪ್ರಾಣ ಹಾರಿ ಹೋಯಿತು. ಹಲವು ಜನರು ಗಾಯಗೊಂಡರು. ಈ ಅಭಿಮಾನವನ್ನು ಏನೆಂದು ಹೇಳಬೇಕು? ಈ ಅಭಿಮಾನಿಗಳ ಸಾವಿಗೆ ಯಾರನ್ನು ಹೊಣೆ ಮಾಡಬೇಕು? ಇದು ಆಯೋಜಕರ ವೈಫಲ್ಯವೇ? ಇಲ್ಲ ಅಭಿಮಾನಿಗಳ ಅತಿರೇಕದ ವರ್ತನೆಯಿಂದ ಉಂಟಾದ ಘಟನೆಯೇ? ಎಲ್ಲ ಕ್ರೀಡೆ ಗಳ ಬಗ್ಗೆ ಅಭಿಮಾನವಿರಬೇಕು. ಆದರೆ ಅಂಧಾಭಿಮಾನಿಗಳಾದಾಗ ಇಂತಹ ಘಟನೆಗಳು ಸಂಭವಿಸುತ್ತವೆ. ಅಭಿಮಾನವಿರಲಿ, ಆದರೆ ಅಂಧಾಭಿಮಾನ ಬೇಡ.

ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

15 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

15 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

15 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

15 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

16 hours ago