Andolana originals

ಓದುಗರ ಪತ್ರ: ಮಂಗನ ಕೈಗೆ ……….

ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ ಹಿಡಿತದಲ್ಲಿರುವ ಹಾರ್ಮುಜ್ ಜಲಸಂಧಿಯಲ್ಲಿ   ತಮ್ಮ ಸೇನಾ ಪಡೆಯನ್ನು ನಿಯೋಜಿಸಲು ತಿರಸ್ಕರಿಸಿರುವುದು ಅಮೆರಿಕಾದ ಅಧಕ್ಷ ಡೊನಾಲ್ಡ್ ಟ್ರಂಪ್‌ಗೆ ಉಂಟಾಗಿರುವ ದೊಡ್ಡ ಮುಖಭಂಗವಾಗಿದೆ. ಯುದ್ಧ ಮುಂದುವರಿದಂತೆಲ್ಲ, ಅಮೆರಿಕಾ ನಿಯಂತ್ರಣ ಸಡಿಲಗೊಳ್ಳುತ್ತಿರುವುದು, ಟ್ರಂಪ್‌ನ ಅಟ್ಟಹಾಸಕ್ಕೆ ಬಿದ್ದಿರುವ ಮತ್ತೊಂದು ಕೊಡಲಿ ಪೆಟ್ಟಾಗಿದೆ. ಕೊಲ್ಲಿ ಪ್ರದೇಶದಲ್ಲಿ ತಮ್ಮ ಪ್ರತಿಷ್ಠೆಯನ್ನು ಹೆಚ್ಚಿಸಿಕೊಳ್ಳಲು ಪುಟ್ಟ ಯಹೂದಿ ರಾಷ್ಟ್ರ ಇಸ್ರೇಲ್ ಜೊತೆ ಸೇರಿಕೊಂಡು ಕಳೆದ ಹಲವಾರು ದಿನಗಳಿಂದ ಇರಾನ್ ಮೇಲೆ ದಾಳಿ ನಡೆಸುತ್ತಾ,  ಸಹಸ್ರಾರು ಜನರ ಮಾರಣ ಹೋಮಕ್ಕೆ ಕಾರಣವಾಗಿ,   ಇಡೀ ವಿಶ್ವಕ್ಕೆ ಆತಂಕವನ್ನು ತಂದಿಟ್ಟಿರುವ ಡೊನಾಲ್ಡ್ ಟ್ರಂಪ್ರವರ ಹುಚ್ಚುತನಕ್ಕೆ ಈಗ ಅಮೆರಿಕನ್ನರೇ ತಿರುಗಿಬಿದ್ದಿದ್ದಾರೆ.   ಟ್ರಂಪ್ ರಂತಹ ಹುಂಬನ ಕೈಗೆ ಅಽಕಾರ ಕೊಟ್ಟರೆ, ಮಂಗನ ಕೈಗೆ ಮಾಣಿಕ್ಯ ಕೊಟ್ಟಂತಾಗುತ್ತದೆ ಎಂಬುದಕ್ಕೆ ಈ ಯುದ್ಧವೇ ಸಾಕ್ಷಿಯಾಗಿದೆ.   ಯುದ್ಧದಿಂದ ಮುಂದೆ ಉಂಟಾಗಬಹುದಾದ ಮತ್ತಷ್ಟು ಹಾನಿಯನ್ನು ತಡೆಗಟ್ಟಲು, ಅಮೆರಿಕಾದ ಈ ಹುಚ್ಚು ದೊರೆ ಈಗಲಾದರೂ ಮುಂದಾಗದಿದ್ದದರೆ ಇತಿಹಾಸ ಅವರನ್ನು ಕ್ಷಮಿಸುವುದಿಲ್ಲ.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 hour ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

8 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

8 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

12 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

13 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

13 hours ago