ಓದುಗರ ಪತ್ರ
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆದಿದೆ.ಆದರೆ ಎಷ್ಟೋ ರಾಜಕೀಯ ವ್ಯಕ್ತಿಗಳು ವೇದಿಕೆ ಮೇಲೆ ಒಂದು ಧರ್ಮದ ಬಗ್ಗೆ ದ್ವೇಷ ಭಾಷಣ ಮಾಡುವುದರಿಂದ ಸಮಾಜಕ್ಕೆ ಏನನ್ನು ನೀಡಲು ಸಾಧ್ಯ? ಈ ರೀತಿ ಭಾಷಣ ಮಾಡುವವರನ್ನು ನಿರ್ಬಂಧಿಸುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಇಂತಹ ಕಾನೂನುಗಳು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತವೆ ಎಂಬುದೂ ಮುಖ್ಯವಾಗುತ್ತದೆ.
ಇದನ್ನೂ ಓದಿ:-ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?
ಇಂದಿಗೂ ಎಷ್ಟೋ ಹಳ್ಳಿಗಳಲ್ಲಿ ಸಾಮಾಜಿಕ ಬಹಿಷ್ಕಾರ, ಅಸ್ಪೃಶ್ಯತೆ, ಜಾತಿ ಆಚರಣೆಗಳು ಚಾಲ್ತಿಯಲ್ಲಿ ಇವೆ. ಇಂತಹ ಆಚರಣೆಗಳ ವಿರುದ್ಧ ಇರುವ ಕಾನೂನುಗಳನ್ನು ಅನುಷ್ಠಾನಗೊಳಿಸುವಲ್ಲಿ ಪೊಲೀಸರು, ಅಧಿಕಾರಿಗಳು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತಿದ್ದಾರೆ ಎನ್ನುವುದೂ ಪ್ರಶ್ನೆಯಾಗಿದೆ. ಈಗಾಗಲೇ ಜಾರಿಯಲ್ಲಿರುವ ಇಂತಹ ಕಾನೂನುಗಳ, ಪ್ರಕಾರ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ? ಎಷ್ಟು ಜನರಿಗೆ ಕಾನೂನಿನ ಶಿಕ್ಷೆ ಆಗಿದೆ. ಒಂದು ಧರ್ಮವನ್ನು ಗುರಿಯಾಗಿಸಿ ದ್ವೇಷ ಭಾಷಣ ಮಾಡಿ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುವವರ ಮೇಲೆ ಕ್ರಮ ಕೈಗೊಳ್ಳುವವರಿಗೂ ಕಾನೂನಿನ ಶಿಕ್ಷೆ ಆಗಲೇಬೇಕು. ಅವರು ಯಾರೇ ಆಗಿರಲಿ.ಈ ರೀತಿಯ ಭಾಷಣಗಳು ಮುಂದಿನ ಪೀಳಿಗೆಗೆ ಏನು ಸಂದೇಶ ನೀಡುತ್ತವೆ ಎಂಬುದನು ಎಲ್ಲರೂ ಅರಿಯಬೇಕು.
-ಎನ್.ಆಶಾ, ಬೆಂಗಳೂರು
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…