Andolana originals

ಓದುಗರ ಪತ್ರ:  ತಂಬಾಕು ಉತ್ಪನ್ನ  ಸೆಸ್: ಕಠಿಣ ಕ್ರಮ ಅಗತ್ಯ

ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ಕ್ರಮ ಸ್ವಾಗತಾರ್ಹ . ಇದರೊಂದಿಗೆ ಇನ್ನೂ ಹೆಚ್ಚಿನ ಕ್ರಮಗಳ ಅವಶ್ಯಕತೆ ಇದೆ. ದೇಶದಲ್ಲಿ ಜನಸಂಖ್ಯೆಯ ಶೇ.೧೦ಕ್ಕಿಂತಲೂ ಹೆಚ್ಚು ಜನರು ಹೊಗೆ ರಹಿತ ತಂಬಾಕು ಸೇವನೆ ಮಾಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ

ಪ್ರತಿವರ್ಷ ಸುಮಾರು ೩.೭ ಲಕ್ಷ ಮಂದಿ ಬಾಯಿ ಕ್ಯಾನ್ಸರ್‌ನಿಂದ ಪ್ರಾಣ ಕಳೆದುಕೊಳ್ಳುತ್ತಿರುವುದು ಗಂಭೀರ ಪರಿಸ್ಥಿತಿಯನ್ನು ತೋರುತ್ತದೆ. ಉತ್ಪಾದನಾ ಸಾಮರ್ಥ್ಯಕ್ಕೆ ತೆರಿಗೆ ವಿಧಿಸುವ ಮೂಲಕ ಬಳಕೆ ಸ್ವಲ್ಪ ಮಟ್ಟಿಗೆ ಕಡಿಮೆಯಾದರೂ ಕಠಿಣ ನಿಯಂತ್ರಣ, ಜಾಹೀರಾತು ನಿಷೇಧ, ಮತ್ತು ವ್ಯಸನ ವಿಮೋಚನೆ ಕಾರ್ಯಕ್ರಮಗಳಿಲ್ಲದೆ ನಿಜವಾದ ಪರಿಣಾಮ ಕಷ್ಟ ಸಾಧ್ಯ. ರಾಜ್ಯಗಳು ಈ ಸೆಸ್‌ನಿಂದ ತಮ್ಮ ಪಾಲಿಗೆ ಬರುವ ಆದಾಯವನ್ನು ಪಾರದರ್ಶಕವಾಗಿ ಕ್ಯಾನ್ಸರ್ ತಪಾಸಣೆ, ಗ್ರಾಮೀಣ ಭಾಗದ ಜನರ ಆರೋಗ್ಯ ಜಾಗೃತಿ, ಮತ್ತು ವ್ಯಸನ ನಿರ್ಮೂಲನಾ ಕೇಂದ್ರಗಳಿಗೆ ಬಳಸಬೇಕು.

-ಡಾ. ಎಚ್.ಕೆ. ವಿಜಯಕುಮಾರ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago