ಓದುಗರ ಪತ್ರ
ಮೈಸೂರು ದಸರಾ ಮಹೋತ್ಸವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಬರುವ ಪ್ರವಾಸಿಗರು ಸ್ವಚ್ಛತೆ ಕಾಪಾಡುವ ಜತೆಗೆ ಸಭ್ಯತೆಯಿಂದ ವರ್ತಿಸುವುದನ್ನೂ ಕಲಿಯಬೇಕಿದೆ. ಕೆಲ ದಿನಗಳಿಂದ ಹಿಂದೆ ಅರಮನೆಯ ಒಳಭಾಗದಲ್ಲಿ ಪ್ರವಾಸಿಗರೊಂದಿಗೆ ಬಂದಿದ್ದ ಬಾಲಕನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದು, ಇದನ್ನು ಬೇರೆ ರಾಜ್ಯದ ಪ್ರವಾಸಿಗನೊಬ್ಬ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಅರಮನೆಯ ಭದ್ರತಾ ಪಡೆಗಳ ಕಾರ್ಯನಿರ್ವಹಣೆ ಬಗ್ಗೆ ಹಲವಾರು ಪ್ರಶ್ನೆಗಳು ಉದ್ಭವಿಸುವಂತೆ ಮಾಡಿದೆ. ಅರಮನೆ ಒಂದು ಪ್ರವಾಸಿ ತಾಣವಾಗಿರುವ ಜತೆಗೆ ಮಹಾರಾಜರು ವಾಸವಿದ್ದ ಸ್ಥಳ. ಹೀಗಾಗಿ ಅರಮನೆ ಎಂದರೆ ಮೈಸೂರಿಗರಿಗೆ ಪೂಜ್ಯನೀಯ ಭಾವ. ಬರುವ ಪ್ರವಾಸಿಗರು ಯಾರೇ ಆಗಿದ್ದರೂ ಈ ಭಾವನೆಗಳಿಗೆ ಧಕ್ಕೆ ತರುವಂತೆ ನಡೆದುಕೊಳ್ಳಬಾರದು. ಅರಮನೆ ಆವರಣದಲ್ಲಿ ಆ ಬಾಲಕ ಮೂತ್ರ ವಿಸರ್ಜನೆ ಮಾಡುತ್ತಿದ್ದರೂ ಅವರ ತಂದೆ-ತಾಯಿ ಮಗುವಿಗೆ ಬುದ್ದಿ ಹೇಳದೆ ಸುಮ್ಮನಿದ್ದದ್ದು ವಿಪರ್ಯಾಸ. ಮುಂದಾದರೂ ಬರುವ ಪ್ರವಾಸಿಗರು ಇಲ್ಲಿನ ಸಂಸ್ಕೃತಿಯನ್ನು ಗೌರವಿಸುವ ಜತೆಗೆ ತಮ್ಮ ಮಕ್ಕಳಿಗೂ ಗೌರವಿಸುವುದನ್ನು ಕಲಿಸಲಿ.
ಆರ್.ಯಶಸ್, ಮೈಸೂರು.
ಬೆಂಗಳೂರು : ನಟ ಕಿಚ್ಚ ಸುದೀಪ್ ಮಗಳು, ಗಾಯಕಿ ಸಾನ್ವಿ ಸುದೀಪ್ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ…
ಬೆಂಗಳೂರು: ಮಹಾರಾಷ್ಟ್ರದ ಎಎನ್ಟಿಎಫ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…
ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…
ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…
ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…
ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…