ಓದುಗರ ಪತ್ರ
ಮೈಸೂರು ದಸರಾ ಮಹೋತ್ಸವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಬರುವ ಪ್ರವಾಸಿಗರು ಸ್ವಚ್ಛತೆ ಕಾಪಾಡುವ ಜತೆಗೆ ಸಭ್ಯತೆಯಿಂದ ವರ್ತಿಸುವುದನ್ನೂ ಕಲಿಯಬೇಕಿದೆ. ಕೆಲ ದಿನಗಳಿಂದ ಹಿಂದೆ ಅರಮನೆಯ ಒಳಭಾಗದಲ್ಲಿ ಪ್ರವಾಸಿಗರೊಂದಿಗೆ ಬಂದಿದ್ದ ಬಾಲಕನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದು, ಇದನ್ನು ಬೇರೆ ರಾಜ್ಯದ ಪ್ರವಾಸಿಗನೊಬ್ಬ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಅರಮನೆಯ ಭದ್ರತಾ ಪಡೆಗಳ ಕಾರ್ಯನಿರ್ವಹಣೆ ಬಗ್ಗೆ ಹಲವಾರು ಪ್ರಶ್ನೆಗಳು ಉದ್ಭವಿಸುವಂತೆ ಮಾಡಿದೆ. ಅರಮನೆ ಒಂದು ಪ್ರವಾಸಿ ತಾಣವಾಗಿರುವ ಜತೆಗೆ ಮಹಾರಾಜರು ವಾಸವಿದ್ದ ಸ್ಥಳ. ಹೀಗಾಗಿ ಅರಮನೆ ಎಂದರೆ ಮೈಸೂರಿಗರಿಗೆ ಪೂಜ್ಯನೀಯ ಭಾವ. ಬರುವ ಪ್ರವಾಸಿಗರು ಯಾರೇ ಆಗಿದ್ದರೂ ಈ ಭಾವನೆಗಳಿಗೆ ಧಕ್ಕೆ ತರುವಂತೆ ನಡೆದುಕೊಳ್ಳಬಾರದು. ಅರಮನೆ ಆವರಣದಲ್ಲಿ ಆ ಬಾಲಕ ಮೂತ್ರ ವಿಸರ್ಜನೆ ಮಾಡುತ್ತಿದ್ದರೂ ಅವರ ತಂದೆ-ತಾಯಿ ಮಗುವಿಗೆ ಬುದ್ದಿ ಹೇಳದೆ ಸುಮ್ಮನಿದ್ದದ್ದು ವಿಪರ್ಯಾಸ. ಮುಂದಾದರೂ ಬರುವ ಪ್ರವಾಸಿಗರು ಇಲ್ಲಿನ ಸಂಸ್ಕೃತಿಯನ್ನು ಗೌರವಿಸುವ ಜತೆಗೆ ತಮ್ಮ ಮಕ್ಕಳಿಗೂ ಗೌರವಿಸುವುದನ್ನು ಕಲಿಸಲಿ.
ಆರ್.ಯಶಸ್, ಮೈಸೂರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…