ಓದುಗರ ಪತ್ರ
ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಪಾರಂಪರಿಕ ಕ್ರೀಡೆ ಕುಸ್ತಿ ಪಂದ್ಯಾವಳಿ ಪ್ರೋತ್ಸಾಹವಿಲ್ಲದೆ ವರ್ಷದಿಂದ ವರ್ಷಕ್ಕೆ ಕಳೆಗುಂದುತ್ತಿದೆ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎಂಬ ಗಾದೆ ಮಾತಿನಂತೆ ಕೆಲವರು ದಸರಾ ಕುಸ್ತಿಯಲ್ಲಿ ಭಾಗವಹಿಸುವ ಪೈಲ್ವಾನರಿಗೆ ಪ್ರೋತ್ಸಾಹ ಧನ ನೀಡುವಲ್ಲಿ ತಾರತಮ್ಯ ಮಾಡಿ, ಆನ್ ಲೈನ್ ಪೇಮೆಂಟ್ ಮಾಡುತ್ತೇವೆ ಎಂದು ಹೇಳಿ ಎಷ್ಟೋ ಪೈಲ್ವಾನರಿಗೆ ಪ್ರೋತ್ಸಾಹಧನ ನೀಡದೇ ವಂಚಿಸುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ.
ದೊಡ್ಡಕೆರೆ ಮೈದಾನದ ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣಕ್ಕೆ ಚಾವಣಿ ಇಲ್ಲದೆ ಬಿಸಿಲಿನ ತಾಪ ತಾಳಲಾರದೆ ಹಾಗೂ ಮಳೆ ಬಂದಾಗ ಪ್ರೇಕ್ಷಕರು ಪಡುವ ಕಷ್ಟ ಅಷ್ಟಿಷ್ಟಲ್ಲ. ದಶಕಗಳ ಹಿಂದೆ ಕುಸ್ತಿ ಪಂದ್ಯಾವಳಿಗಳಿಗೆ ವ್ಯಾಪಕ ಪ್ರಚಾರ ಮಾಡಲಾಗುತ್ತಿತ್ತು.
ಆದರೆ ಇತ್ತೀಚಿನ ದಿನಗಳಲ್ಲಿ ಪ್ರಚಾರವಿಲ್ಲದೆ ನೋಡುಗರ ಸಂಖ್ಯೆ ಕ್ಷೀಣಿಸುತ್ತಿದೆ. ಈ ವರ್ಷದ ದಸರಾ ಮಹೋತ್ಸವ ಪ್ರಾರಂಭವಾಗಲು ಸಮಯವಿರುವುದರಿಂದ ಪ್ರೋತ್ಸಾಹ ಧನ ಹೆಚ್ಚಿಸಿ, ವ್ಯಾಪಕ ಪ್ರಚಾರ ನಡೆಸಿ, ಪಾರದರ್ಶಕತೆಗೆ ಆದ್ಯತೆ ನೀಡಿ ಪಾರಂಪರಿಕ ಕ್ರೀಡೆಯನ್ನು ಉಳಿಸುವುದು ಅಗತ್ಯ.
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…