ಓದುಗರ ಪತ್ರ
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು, ನೀರು ಹಾಗೂ ಲೇಸ್, ಕುರ್ಕುರೆ ಮೊದಲಾದ ತಿಂಡಿಯ ಪೊಟ್ಟಣಗಳನ್ನು ಮಾರಾಟ ಮಾಡುತ್ತಾರೆ. ಆದರೆ ಅವರು ಹಾಕಿಕೊಂಡಿರುವ ಬಟ್ಟೆಗಳು ಕೊಳಕಾಗಿರುತ್ತವೆ ಹಾಗೂ ಎಷ್ಟೋ ಮಾರಾಟಗಾರರು ಮುಖ ಕ್ಷೌರ ಮಾಡದೇ, ತಲೆ ಕೂದಲು ಕತ್ತರಿಸಿರುವುದಿಲ್ಲ. ಪ್ರಯಾಣಿಕರಿಗೆ ಇದು ಮುಜುಗರ ತರಿಸುತ್ತದೆ.
ರೈಲಿನಲ್ಲಿ ಊಟ, ತಿಂಡಿ ಹಾಗೂ ಪಾನೀಯಗಳನ್ನು ಮಾರಾಟ ಮಾಡುವವರು ಶುಭ್ರವಾದ ಬಟ್ಟೆ ಧರಿಸಬೇಕು ಹಾಗೂ ನಿಯಮಿತವಾಗಿ ಕಟಿಂಗ್, ಶೇವಿಂಗ್ ಮಾಡಿಕೊಂಡಿರಬೇಕು ಎಂಬ ನಿಯಮವನ್ನು ರೈಲ್ವೆ ಇಲಾಖೆ ಅಧಿಕಾರಿಗಳು ರೂಪಿಸಬೇಕು. ಇದರಿಂದ ಮಾರಾಟ ಮಾಡುವವರೂ ಶಿಸ್ತು ಪಾಲಿಸಿದಂತಾಗುತ್ತದೆ. ಪ್ರಯಾಣಿಕರಿಗೂ ಅವರಿಂದ ಮುಜುಗರವಾಗುವುದಿಲ್ಲ.
-ಅನಿರುದ್ಧ , ಮೈಸೂರು
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ೩೮.೫ ಸಾವಿರ ಜನ ಇನ್ಸ್ಟಾಗ್ರಾಮ್ ಫಾಲೋವರ್ಸ್ಗೆ ಮಾರ್ಗದರ್ಶನ ೨೦೦೬ರ ಜೂನ್ ೩೦ ರಂದು ಹುಟ್ಟಿದ…