ಓದುಗರ ಪತ್ರ
ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ ಏಳು ಕ್ರೀಡಾ ವಸತಿ ನಿಲಯಗಳಲ್ಲಿ ಕುಸ್ತಿ ಕ್ರೀಡಾ ವಿಭಾಗಗಳನ್ನು ಆರಂಭಿಸಲಾಗುತ್ತದೆ ಎಂದು ಕ್ರೀಡಾ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಮಂಡಲ ಅಧಿವೇಶನದಲ್ಲಿ ಹೇಳಿರುವುದು ಸ್ವಾಗ ತಾರ್ಹವಾಗಿದೆ.
ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡರು ದೇಸಿ ಕ್ರೀಡೆ ಕುಸ್ತಿಗೆ ಸರ್ಕಾರದ ಬೆಂಬಲ, ಕುಸ್ತಿ ತರಬೇತಿ ಕೇಂದ್ರಗಳು ಹಾಗೂ ತರಬೇತಿದಾರರ ನೇಮಕ ಮಾಡುವುದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಿದ್ದರಾಮಯ್ಯನವರು, ಪ್ರತಿವರ್ಷ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಕ್ರೀಡೆಯನ್ನು ಪ್ರೋತ್ಸಾಹಿಸಲು ಸರ್ಕಾರ ಮುಂದಾಗಿದೆ ಎಂದು ಹೇಳಿರುವುದು ಶ್ಲಾಘನೀಯ.
– ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…