Andolana originals

ಓದುಗರ ಪತ್ರ:  ಸಾರಿಗೆ ಇಲಾಖೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಿ

ಇತ್ತೀಚಿನ ದಿನಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಬಸ್ ಅಪಘಾತಗಳು ಮತ್ತು ಬೆಂಕಿ ಅವಘಡಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಸಾರ್ವಜನಿಕ ಸಾರಿಗೆ ಸೇವೆಗಳು ಲಕ್ಷಾಂತರ ಜನರ ದಿನನಿತ್ಯದ ಜೀವನದ ಅವಿಭಾಜ್ಯ ಭಾಗವಾಗಿವೆ.  ಆದರೆ ಸುರಕ್ಷತೆ ಕುರಿತಾಗಿ ಅಗತ್ಯ ಎಚ್ಚರಿಕೆ ಮತ್ತು ತಾಂತ್ರಿಕ ಸುಧಾರಣೆಗಳು ಇನ್ನೂ ಅಲ್ಪಮಟ್ಟದಲ್ಲೇ ಇವೆ. ನಮ್ಮ ರಾಜ್ಯದ ಬಸ್‌ಗಳಲ್ಲಿ ಅಗ್ನಿ ಶಾಮಕ (ಫೈರ್ ಎಕ್ಸ್ಟಿಂಗ್ವಿಷರ್) ಉಪಕರಣ ಅಳವಡಿಸಬೇಕು ಎಂಬ ನಿಯಮದ ಅನುಷ್ಠಾನವನ್ನು ಬಿಗಿಗೊಳಿಸುವ ಅವಶ್ಯಕತೆ ಇದೆ. ಅದೇ ರೀತಿ ಬಸ್ಗಳಲ್ಲಿ ತಾಪಮಾನ ನಿಯಂತ್ರಕ (ಟೆಂಪರೇಚರ್ ಸೆನ್ಸಾರ್) ಹಾಗೂ ಅಗ್ನಿ ಪತ್ತೆ ಯಂತ್ರ (ಫೈರ್ ಡಿಟೆಕ್ಟರ್) ಅಳವಡಿಸುವುದು ಕಡ್ಡಾಯವಾಗ ಬೇಕಿದೆ.

ಬಸ್‌ಗಳ ಮೇಲ್ಭಾಗದಲ್ಲಿ ಸ್ವಯಂಚಾಲಿತ ನೀರಿನ ಸಿಂಪಡಣೆ ವ್ಯವಸ್ಥೆ (ಆಟೋಮ್ಯಾಟಿಕ್ ವಾಟರ್ ಸ್ಪ್ರಿಂಕ್ಲರ್ ಸಿಸ್ಟಂ) ಅಳವಡಿಸುವುದು ಹಾಗೂ ಬಸ್ ಚಾಲಕರು ಮತ್ತು ನಿರ್ವಾಹಕರು ಪ್ರತಿ ಆರು ತಿಂಗಳಿಗೊಮ್ಮೆ ಸುರಕ್ಷತಾ ತರಬೇತಿ ಪಡೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಪ್ರಯಾಣಿಕರಿಗೆ ತುರ್ತು ಪರಿಸ್ಥಿತಿಯಲ್ಲಿ ಹೇಗೆ ಪ್ರತಿಕ್ರಿಯಿ ಸಬೇಕು ಎಂಬ ಮಾಹಿತಿಯನ್ನು ಬಸ್‌ನ ಒಳಭಾಗದಲ್ಲೇ ಸ್ಪಷ್ಟವಾಗಿ ಪ್ರದರ್ಶಿಸಬೇಕು. ಸಾರಿಗೆ ಇಲಾಖೆಯು ಈ ಕ್ರಮಗಳನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನ ಮಾಡಿದರೆ, ಸಾರ್ವಜನಿಕರು ಭಯರಹಿತವಾಗಿ, ಪ್ರಯಾಣಿಸಬಹುದು. ಸರ್ಕಾರ ತಕ್ಷಣ ಈ ಕ್ರಮಗಳನ್ನು ಕೈಗೊಂಡು ಹೊಸ ಸುರಕ್ಷತಾ ನಿಯಮಗಳನ್ನು ಜಾರಿಗೊಳಿಸಲಿ.

-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

39 mins ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

51 mins ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

2 hours ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

2 hours ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

3 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

3 hours ago