Andolana originals

ಓದುಗರ ಪತ್ರ:  ಸಾರಿಗೆ ಇಲಾಖೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಿ

ಇತ್ತೀಚಿನ ದಿನಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಬಸ್ ಅಪಘಾತಗಳು ಮತ್ತು ಬೆಂಕಿ ಅವಘಡಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಸಾರ್ವಜನಿಕ ಸಾರಿಗೆ ಸೇವೆಗಳು ಲಕ್ಷಾಂತರ ಜನರ ದಿನನಿತ್ಯದ ಜೀವನದ ಅವಿಭಾಜ್ಯ ಭಾಗವಾಗಿವೆ.  ಆದರೆ ಸುರಕ್ಷತೆ ಕುರಿತಾಗಿ ಅಗತ್ಯ ಎಚ್ಚರಿಕೆ ಮತ್ತು ತಾಂತ್ರಿಕ ಸುಧಾರಣೆಗಳು ಇನ್ನೂ ಅಲ್ಪಮಟ್ಟದಲ್ಲೇ ಇವೆ. ನಮ್ಮ ರಾಜ್ಯದ ಬಸ್‌ಗಳಲ್ಲಿ ಅಗ್ನಿ ಶಾಮಕ (ಫೈರ್ ಎಕ್ಸ್ಟಿಂಗ್ವಿಷರ್) ಉಪಕರಣ ಅಳವಡಿಸಬೇಕು ಎಂಬ ನಿಯಮದ ಅನುಷ್ಠಾನವನ್ನು ಬಿಗಿಗೊಳಿಸುವ ಅವಶ್ಯಕತೆ ಇದೆ. ಅದೇ ರೀತಿ ಬಸ್ಗಳಲ್ಲಿ ತಾಪಮಾನ ನಿಯಂತ್ರಕ (ಟೆಂಪರೇಚರ್ ಸೆನ್ಸಾರ್) ಹಾಗೂ ಅಗ್ನಿ ಪತ್ತೆ ಯಂತ್ರ (ಫೈರ್ ಡಿಟೆಕ್ಟರ್) ಅಳವಡಿಸುವುದು ಕಡ್ಡಾಯವಾಗ ಬೇಕಿದೆ.

ಬಸ್‌ಗಳ ಮೇಲ್ಭಾಗದಲ್ಲಿ ಸ್ವಯಂಚಾಲಿತ ನೀರಿನ ಸಿಂಪಡಣೆ ವ್ಯವಸ್ಥೆ (ಆಟೋಮ್ಯಾಟಿಕ್ ವಾಟರ್ ಸ್ಪ್ರಿಂಕ್ಲರ್ ಸಿಸ್ಟಂ) ಅಳವಡಿಸುವುದು ಹಾಗೂ ಬಸ್ ಚಾಲಕರು ಮತ್ತು ನಿರ್ವಾಹಕರು ಪ್ರತಿ ಆರು ತಿಂಗಳಿಗೊಮ್ಮೆ ಸುರಕ್ಷತಾ ತರಬೇತಿ ಪಡೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಪ್ರಯಾಣಿಕರಿಗೆ ತುರ್ತು ಪರಿಸ್ಥಿತಿಯಲ್ಲಿ ಹೇಗೆ ಪ್ರತಿಕ್ರಿಯಿ ಸಬೇಕು ಎಂಬ ಮಾಹಿತಿಯನ್ನು ಬಸ್‌ನ ಒಳಭಾಗದಲ್ಲೇ ಸ್ಪಷ್ಟವಾಗಿ ಪ್ರದರ್ಶಿಸಬೇಕು. ಸಾರಿಗೆ ಇಲಾಖೆಯು ಈ ಕ್ರಮಗಳನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನ ಮಾಡಿದರೆ, ಸಾರ್ವಜನಿಕರು ಭಯರಹಿತವಾಗಿ, ಪ್ರಯಾಣಿಸಬಹುದು. ಸರ್ಕಾರ ತಕ್ಷಣ ಈ ಕ್ರಮಗಳನ್ನು ಕೈಗೊಂಡು ಹೊಸ ಸುರಕ್ಷತಾ ನಿಯಮಗಳನ್ನು ಜಾರಿಗೊಳಿಸಲಿ.

-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

54 mins ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

57 mins ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

59 mins ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 hour ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 hour ago