ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ ವಾಹನದ ಎಂಜಿನ್ ಸ್ವಿಚ್ ಆಫ್ ಮಾಡಿ ಗ್ರೀನ್ ಸಿಗ್ನಲ್ ಬರುವ ೫ ಅಥವಾ ೧೦ ಸೆಕೆಂಡಿನಲ್ಲಿ ಮತ್ತೆ ಚಾಲನೆ ಮಾಡುವುದು ಅಗತ್ಯ.
ಇದರಿಂದ ಇಂಧನ ಉಳಿತಾಯವಾಗುತ್ತದೆ. ಎಂಜಿನ್ ಹೊಗೆ ಕಡಿಮೆ ಆಗಿ ಸುತ್ತಲಿನ ಪರಿಸರ ಎಂಜಿನ್ ಹೊಗೆಯಮಾಲಿನ್ಯದಿಂದ ಮುಕ್ತವಾಗುತ್ತದೆ. ಸಿಗ್ನಲ್ ಬಳಿ ಕಾಯುವಾಗ ಸವಾರರು ವಾಹನಗಳ ಹೊಗೆಯ ಸೇವನೆ ಮಾಡುವುದು ತಪ್ಪುತ್ತದೆ. ಶಬ್ದ ಮಾಲಿನ್ಯವೂ ಕಡಿಮೆ ಆಗುತ್ತದೆ.
ಈ ನಿಯಮವನ್ನು ಎಲ್ಲಾ ನಗರ ಪ್ರದೇಶಗಳಲ್ಲಿ ಅನುಸರಿಸಿದಲ್ಲಿ ಆಗುವ ಇಂಧನ ಉಳಿತಾಯ ಅಗಾಧ. ವಾಹನದಲ್ಲಿ ಪಯಣಿಸುವವರಿಗೆ ವಾಯು ಮಾಲಿನ್ಯದಿಂದ ರಕ್ಷಣೆಯೂ ದೊರೆಯುತ್ತದೆ. ಈ ನಿಟ್ಟಿನಲ್ಲಿ ತಜ್ಞರು ಗಮನ ಹರಿಸಬೇಕು.
-ಲಕ್ಷ್ಮಣ್ ಗೊರ್ಲಕಟ್ಟೆ, ಗದ್ದಿಗೆ ರಸ್ತೆ, ಮೈಸೂರು
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…