ಗುಂಡ್ಲುಪೇಟೆ ತಾಲ್ಲೂಕಿನ ಚಿಕ್ಕಾಟಿ ಗ್ರಾಮದಲ್ಲಿನ ಕುಡಿಯುವ ನೀರಿನ ಟ್ಯಾಂಕ್ ಸುತ್ತ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.
ಈ ಟ್ಯಾಂಕ್ನಲ್ಲಿ ನಿತ್ಯ ನೀರು ತುಂಬಿ ಹರಿಯುತ್ತಿದ್ದು ನೀರು ನಿಲ್ಲಿಸಲು ಯಾವುದೇ ವ್ಯವಸ್ಥೆ ಇಲ್ಲ ಇದರಿಂದಾಗಿ ನೀರು ಸೋರಿಕೆಯಾಗುತ್ತಿದ್ದು, ಟ್ಯಾಂಕ್ ಸುತ್ತ ಪಾಚಿ ಬೆಳೆದುಕೊಂಡಿದೆ. ಅಲ್ಲದೆ ಟ್ಯಾಂಕ್ನ ಸುತ್ತಲೂ ನೀರು ನಿಂತಿದ್ದು, ದುರ್ವಾಸನೆ ಬೀರಲಾರಂಭಿಸಿದೆ. ಇಷ್ಟಿದ್ದರೂ ಜನರು ವಿಧಿ ಇಲ್ಲದ ಈ ಅಶುದ್ಧ ನೀರನ್ನೇ ಬಳಸಬೇಕಾಗಿದೆ.
ಇಂತಹ ಟ್ಯಾಂಕನ್ನು ಸ್ವಚ್ಛವಾಗಿಟ್ಟು ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕಾದದ್ದು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕರ್ತವ್ಯ. ಆದರೆ ಅಧಿಕಾರಿಗಳು ನೀರಿನ ಟ್ಯಾಂಕನ್ನು ಸರಿಪಡಿಸುವುದಕ್ಕಾಗಲಿ, ಅದರ ಸುತ್ತಲು ಸ್ವಚ್ಛತೆ ಕಾವಾಡುವುದಕ್ಕೂ ಮುಂದಾಗಿಲ್ಲ. ಇನ್ನು ಮುಂದಾದರೂ ಗ್ರಾಮ ಪಂಚಾಯಿಯವರು ಟ್ಯಾಂಕನ್ನು ಸ್ವಚ್ಛಗೊಳಿಸಿ ನೀರು ಸೋರಿಕೆಯಾಗದಂತೆ ನೋಡಿಕೊಳ್ಳಬೇಕಿದೆ.
-ಎನ್.ಆರ್.ಚೇತನ್, ನಂಜನಗೂಡು ತಾ
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…