Andolana originals

ಓದುಗರ ಪತ್ರ: ನೀರಿನ ಟ್ಯಾಂಕ್ ಸುತ್ತ ಸ್ವಚ್ಛತೆ ಕಾಪಾಡಿ

ಗುಂಡ್ಲುಪೇಟೆ ತಾಲ್ಲೂಕಿನ ಚಿಕ್ಕಾಟಿ ಗ್ರಾಮದಲ್ಲಿನ ಕುಡಿಯುವ ನೀರಿನ ಟ್ಯಾಂಕ್ ಸುತ್ತ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.
ಈ ಟ್ಯಾಂಕ್‌ನಲ್ಲಿ ನಿತ್ಯ ನೀರು ತುಂಬಿ ಹರಿಯುತ್ತಿದ್ದು ನೀರು ನಿಲ್ಲಿಸಲು ಯಾವುದೇ ವ್ಯವಸ್ಥೆ ಇಲ್ಲ ಇದರಿಂದಾಗಿ ನೀರು ಸೋರಿಕೆಯಾಗುತ್ತಿದ್ದು, ಟ್ಯಾಂಕ್ ಸುತ್ತ ಪಾಚಿ ಬೆಳೆದುಕೊಂಡಿದೆ. ಅಲ್ಲದೆ ಟ್ಯಾಂಕ್‌ನ ಸುತ್ತಲೂ ನೀರು ನಿಂತಿದ್ದು, ದುರ್ವಾಸನೆ ಬೀರಲಾರಂಭಿಸಿದೆ. ಇಷ್ಟಿದ್ದರೂ ಜನರು ವಿಧಿ ಇಲ್ಲದ ಈ ಅಶುದ್ಧ ನೀರನ್ನೇ ಬಳಸಬೇಕಾಗಿದೆ.

ಇಂತಹ ಟ್ಯಾಂಕನ್ನು ಸ್ವಚ್ಛವಾಗಿಟ್ಟು ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕಾದದ್ದು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕರ್ತವ್ಯ. ಆದರೆ ಅಧಿಕಾರಿಗಳು ನೀರಿನ ಟ್ಯಾಂಕನ್ನು ಸರಿಪಡಿಸುವುದಕ್ಕಾಗಲಿ, ಅದರ ಸುತ್ತಲು ಸ್ವಚ್ಛತೆ ಕಾವಾಡುವುದಕ್ಕೂ ಮುಂದಾಗಿಲ್ಲ. ಇನ್ನು ಮುಂದಾದರೂ ಗ್ರಾಮ ಪಂಚಾಯಿಯವರು ಟ್ಯಾಂಕನ್ನು ಸ್ವಚ್ಛಗೊಳಿಸಿ ನೀರು ಸೋರಿಕೆಯಾಗದಂತೆ ನೋಡಿಕೊಳ್ಳಬೇಕಿದೆ.

-ಎನ್.ಆರ್.ಚೇತನ್, ನಂಜನಗೂಡು ತಾ

ಆಂದೋಲನ ಡೆಸ್ಕ್

Recent Posts

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

33 mins ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

57 mins ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

3 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

3 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

3 hours ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

3 hours ago