ಗುಂಡ್ಲುಪೇಟೆ ತಾಲ್ಲೂಕಿನ ಚಿಕ್ಕಾಟಿ ಗ್ರಾಮದಲ್ಲಿನ ಕುಡಿಯುವ ನೀರಿನ ಟ್ಯಾಂಕ್ ಸುತ್ತ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.
ಈ ಟ್ಯಾಂಕ್ನಲ್ಲಿ ನಿತ್ಯ ನೀರು ತುಂಬಿ ಹರಿಯುತ್ತಿದ್ದು ನೀರು ನಿಲ್ಲಿಸಲು ಯಾವುದೇ ವ್ಯವಸ್ಥೆ ಇಲ್ಲ ಇದರಿಂದಾಗಿ ನೀರು ಸೋರಿಕೆಯಾಗುತ್ತಿದ್ದು, ಟ್ಯಾಂಕ್ ಸುತ್ತ ಪಾಚಿ ಬೆಳೆದುಕೊಂಡಿದೆ. ಅಲ್ಲದೆ ಟ್ಯಾಂಕ್ನ ಸುತ್ತಲೂ ನೀರು ನಿಂತಿದ್ದು, ದುರ್ವಾಸನೆ ಬೀರಲಾರಂಭಿಸಿದೆ. ಇಷ್ಟಿದ್ದರೂ ಜನರು ವಿಧಿ ಇಲ್ಲದ ಈ ಅಶುದ್ಧ ನೀರನ್ನೇ ಬಳಸಬೇಕಾಗಿದೆ.
ಇಂತಹ ಟ್ಯಾಂಕನ್ನು ಸ್ವಚ್ಛವಾಗಿಟ್ಟು ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕಾದದ್ದು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕರ್ತವ್ಯ. ಆದರೆ ಅಧಿಕಾರಿಗಳು ನೀರಿನ ಟ್ಯಾಂಕನ್ನು ಸರಿಪಡಿಸುವುದಕ್ಕಾಗಲಿ, ಅದರ ಸುತ್ತಲು ಸ್ವಚ್ಛತೆ ಕಾವಾಡುವುದಕ್ಕೂ ಮುಂದಾಗಿಲ್ಲ. ಇನ್ನು ಮುಂದಾದರೂ ಗ್ರಾಮ ಪಂಚಾಯಿಯವರು ಟ್ಯಾಂಕನ್ನು ಸ್ವಚ್ಛಗೊಳಿಸಿ ನೀರು ಸೋರಿಕೆಯಾಗದಂತೆ ನೋಡಿಕೊಳ್ಳಬೇಕಿದೆ.
-ಎನ್.ಆರ್.ಚೇತನ್, ನಂಜನಗೂಡು ತಾ
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…