ಗುಂಡ್ಲುಪೇಟೆ ತಾಲ್ಲೂಕಿನ ಚಿಕ್ಕಾಟಿ ಗ್ರಾಮದಲ್ಲಿನ ಕುಡಿಯುವ ನೀರಿನ ಟ್ಯಾಂಕ್ ಸುತ್ತ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.
ಈ ಟ್ಯಾಂಕ್ನಲ್ಲಿ ನಿತ್ಯ ನೀರು ತುಂಬಿ ಹರಿಯುತ್ತಿದ್ದು ನೀರು ನಿಲ್ಲಿಸಲು ಯಾವುದೇ ವ್ಯವಸ್ಥೆ ಇಲ್ಲ ಇದರಿಂದಾಗಿ ನೀರು ಸೋರಿಕೆಯಾಗುತ್ತಿದ್ದು, ಟ್ಯಾಂಕ್ ಸುತ್ತ ಪಾಚಿ ಬೆಳೆದುಕೊಂಡಿದೆ. ಅಲ್ಲದೆ ಟ್ಯಾಂಕ್ನ ಸುತ್ತಲೂ ನೀರು ನಿಂತಿದ್ದು, ದುರ್ವಾಸನೆ ಬೀರಲಾರಂಭಿಸಿದೆ. ಇಷ್ಟಿದ್ದರೂ ಜನರು ವಿಧಿ ಇಲ್ಲದ ಈ ಅಶುದ್ಧ ನೀರನ್ನೇ ಬಳಸಬೇಕಾಗಿದೆ.
ಇಂತಹ ಟ್ಯಾಂಕನ್ನು ಸ್ವಚ್ಛವಾಗಿಟ್ಟು ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕಾದದ್ದು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕರ್ತವ್ಯ. ಆದರೆ ಅಧಿಕಾರಿಗಳು ನೀರಿನ ಟ್ಯಾಂಕನ್ನು ಸರಿಪಡಿಸುವುದಕ್ಕಾಗಲಿ, ಅದರ ಸುತ್ತಲು ಸ್ವಚ್ಛತೆ ಕಾವಾಡುವುದಕ್ಕೂ ಮುಂದಾಗಿಲ್ಲ. ಇನ್ನು ಮುಂದಾದರೂ ಗ್ರಾಮ ಪಂಚಾಯಿಯವರು ಟ್ಯಾಂಕನ್ನು ಸ್ವಚ್ಛಗೊಳಿಸಿ ನೀರು ಸೋರಿಕೆಯಾಗದಂತೆ ನೋಡಿಕೊಳ್ಳಬೇಕಿದೆ.
-ಎನ್.ಆರ್.ಚೇತನ್, ನಂಜನಗೂಡು ತಾ
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…