ಓದುಗರ ಪತ್ರ
ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಅಧಿವೇಶನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿರುವುದು ಸ್ವಾಗತಾರ್ಹವಾಗಿದೆ. ಇದೊಂದು ಸರ್ಕಾರದ ದಿಟ್ಟ ಹೆಜ್ಜೆ ಎಂದೇ ಹೇಳಬಹುದಾದರೂ, ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡಲಾಗಿದೆ ಎಂದು ದೃಢಪಡಿಸುವವರು ಯಾರು? ಎಂಬಂತಾಗಿದೆ.
ರಾಜ್ಯದ ಬಹುತೇಕ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಂಗಳಲ್ಲಿ ತಾಯಿ, ಮಗುವಿನ ಆರೋಗ್ಯದ ದೃಷ್ಟಿಯಿಂದ ಸಿಸೇರಿಯನ್ ಹೆರಿಗೆ ಮಾಡುವುದು ಅಗತ್ಯ ಎಂಬ ನೆಪ ಹೇಳಿ ಹಣಕ್ಕಾಗಿ ಸಿಸೇರಿಯನ್ ಹೆರಿಗೆ ಮಾಡುವುದು ಸರ್ವೆ ಸಾಮಾನ್ಯವಾಗಿದೆ. ಅನಗತ್ಯ ಸಿಸೇರಿಯನ್ ಹೆರಿಗೆ ಮಾಡುವ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ, ಕಾಯ್ದೆ ಕಾಗದದ ಮೇಲಿನ ಹುಲಿ ಎಂಬಂತಾಗದೇ ಕಟ್ಟು ನಿಟ್ಟಾಗಿ ಜಾರಿಗೆ ಬರುವುದು ಅಗತ್ಯವಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ , ಮೈಸೂರು
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…
ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್…
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…