ಓದುಗರ ಪತ್ರ
ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಅಧಿವೇಶನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿರುವುದು ಸ್ವಾಗತಾರ್ಹವಾಗಿದೆ. ಇದೊಂದು ಸರ್ಕಾರದ ದಿಟ್ಟ ಹೆಜ್ಜೆ ಎಂದೇ ಹೇಳಬಹುದಾದರೂ, ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡಲಾಗಿದೆ ಎಂದು ದೃಢಪಡಿಸುವವರು ಯಾರು? ಎಂಬಂತಾಗಿದೆ.
ರಾಜ್ಯದ ಬಹುತೇಕ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಂಗಳಲ್ಲಿ ತಾಯಿ, ಮಗುವಿನ ಆರೋಗ್ಯದ ದೃಷ್ಟಿಯಿಂದ ಸಿಸೇರಿಯನ್ ಹೆರಿಗೆ ಮಾಡುವುದು ಅಗತ್ಯ ಎಂಬ ನೆಪ ಹೇಳಿ ಹಣಕ್ಕಾಗಿ ಸಿಸೇರಿಯನ್ ಹೆರಿಗೆ ಮಾಡುವುದು ಸರ್ವೆ ಸಾಮಾನ್ಯವಾಗಿದೆ. ಅನಗತ್ಯ ಸಿಸೇರಿಯನ್ ಹೆರಿಗೆ ಮಾಡುವ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ, ಕಾಯ್ದೆ ಕಾಗದದ ಮೇಲಿನ ಹುಲಿ ಎಂಬಂತಾಗದೇ ಕಟ್ಟು ನಿಟ್ಟಾಗಿ ಜಾರಿಗೆ ಬರುವುದು ಅಗತ್ಯವಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ , ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…