ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ ರಸ್ತೆಯು ಹೊಮ್ಮರಗಳ್ಳಿ ಹಾಗೂ ಹೆಗ್ಗಡದೇವನ ಕೋಟೆ ಸಂಪರ್ಕ ರಸ್ತೆಯಾಗಿದೆ. ಈ ರಸ್ತೆಯಲ್ಲಿ ಒಂದು ವಾಹನ ಬಂದರೆ ಸಾಕು, ಅದರಿಂದ ವಿಪರೀತ ದೂಳು ಆವರಿಸಿಕೊಳ್ಳುತ್ತದೆ. ಈ ದೂಳಿನಿಂದ ಪರಿಸರ ಕಲುಷಿತವಾಗಿರುವುದಲ್ಲದೆ, ಸಾರ್ವಜನಿಕರಿಗೆ ಆರೋಗ್ಯ ಸಮಸ್ಯೆ ಉಂಟು ಮಾಡುತ್ತಿದೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿರುವುದರಿಂದ ದ್ವಿಚಕ್ರವಾಹನ ಸವಾರರು ಹಲವು ಬಾರಿ ಬಿದ್ದು ಕೈ, ಕಾಲು ಮುರಿದುಕೊಂಡಿರುವ ಉದಾಹರಣೆಗಳಿವೆ. ಜೊತೆಗೆ ಆಗಾಗ ಸಣ್ಣಪುಟ್ಟ ಅಪಘಾತಗಳೂ ಜರುಗುತ್ತಿವೆ. ಮಳೆಗಾಲದಲ್ಲಂತೂ ಪಾದಚಾರಿಗಳು ಹಾಗೂ ಸವಾರರಿಗೆ ಈ ರಸ್ತೆಯಲ್ಲಿ ಓಡಾಡುವುದು ಒಂದು ರೀತಿಯ ಸವಾಲಿನ ಕೆಲಸವಾಗಿದೆ. ಆದ್ದರಿಂದ ಈ ವ್ಯಾಪ್ತಿಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಈ ರಸ್ತೆಯನ್ನು ಡಾಂಬರೀಕರಣ ಮಾಡಿಸಿ, ಜನರು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
-ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…