Andolana originals

ಓದುಗರ ಪತ್ರ: ಡಾಂಬರು ಕಾಣದ ಕಾಳಿಹುಂಡಿ ರಸ್ತೆ

ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ ರಸ್ತೆಯು ಹೊಮ್ಮರಗಳ್ಳಿ ಹಾಗೂ ಹೆಗ್ಗಡದೇವನ ಕೋಟೆ ಸಂಪರ್ಕ ರಸ್ತೆಯಾಗಿದೆ. ಈ ರಸ್ತೆಯಲ್ಲಿ ಒಂದು ವಾಹನ ಬಂದರೆ ಸಾಕು, ಅದರಿಂದ ವಿಪರೀತ ದೂಳು ಆವರಿಸಿಕೊಳ್ಳುತ್ತದೆ. ಈ ದೂಳಿನಿಂದ ಪರಿಸರ ಕಲುಷಿತವಾಗಿರುವುದಲ್ಲದೆ, ಸಾರ್ವಜನಿಕರಿಗೆ ಆರೋಗ್ಯ ಸಮಸ್ಯೆ ಉಂಟು ಮಾಡುತ್ತಿದೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿರುವುದರಿಂದ ದ್ವಿಚಕ್ರವಾಹನ ಸವಾರರು ಹಲವು ಬಾರಿ ಬಿದ್ದು ಕೈ, ಕಾಲು ಮುರಿದುಕೊಂಡಿರುವ ಉದಾಹರಣೆಗಳಿವೆ. ಜೊತೆಗೆ ಆಗಾಗ ಸಣ್ಣಪುಟ್ಟ ಅಪಘಾತಗಳೂ ಜರುಗುತ್ತಿವೆ. ಮಳೆಗಾಲದಲ್ಲಂತೂ ಪಾದಚಾರಿಗಳು ಹಾಗೂ ಸವಾರರಿಗೆ ಈ ರಸ್ತೆಯಲ್ಲಿ ಓಡಾಡುವುದು ಒಂದು ರೀತಿಯ ಸವಾಲಿನ ಕೆಲಸವಾಗಿದೆ. ಆದ್ದರಿಂದ ಈ ವ್ಯಾಪ್ತಿಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಈ ರಸ್ತೆಯನ್ನು ಡಾಂಬರೀಕರಣ ಮಾಡಿಸಿ, ಜನರು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

-ಬಿ.ಎಸ್.ಸಾಯಿ ಸಂದೇಶ್, ಮೈಸೂರು

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

3 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

11 hours ago