Andolana originals

ಓದುಗರ ಪತ್ರ| ಸರಗೂರು ಬಸ್ ನಿಲ್ದಾಣದಲ್ಲಿ ಅನೈರ್ಮಲ್ಯ

ಸರಗೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಪ್ರಯಾಣಿಕರಿಗೆ ಕಿರಿಕಿರಿಯಾಗುತ್ತಿದೆ. ಈ ನಿಲ್ದಾಣದ ಪಕ್ಕದಲ್ಲಿಯೇ ಕೊಳಚೆ ನೀರು, ಕಸದ ರಾಶಿಯೇ ಸಂಗ್ರಹವಾಗಿದ್ದು, ದುರ್ವಾಸನೆ ಬೀರುತ್ತಿದೆ. ಅಲ್ಲದೆ ಅಕ್ಕಪಕ್ಕದ ಅಂಗಡಿ ಮುಂಗಟ್ಟಿನವರೂ ಕಸವನ್ನು ಇಲ್ಲಿಯೇ ತಂದು ಬೀಸಾಡುತ್ತಿದ್ದಾರೆ. ಈಗ ಮಳೆಗಾಲವಾದ್ದರಿಂದ ಆ ಕೊಳಚೆ ನೀರು ಮಳೆ ನೀರಿನೊಂದಿಗೆ ನಿಲ್ದಾಣದ ಮುಂಭಾಗದಲ್ಲಿಯೇ ಹರಿಯುತ್ತಿದ್ದು, ಪ್ರಯಾಣಿಕರು ಬಸ್ ನಿಲ್ದಾಣಕ್ಕೆ ಬರಲು ಹರಸಾಹಸಪಡುವಂತಾಗಿದೆ.

ಈ ನಿಲ್ದಾಣಕ್ಕೆ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಬಂದು ಹೋಗುತ್ತಾರೆ. ಇಂತಹ ಜನನಿಬಿಡ ಪ್ರದೇಶದಲ್ಲಿನ ಅನೈರ್ಮಲ್ಯದ ವಾತಾವರಣದಿಂದಾಗಿ ಅವರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದ್ದು, ದುರ್ವಾಸನೆ ತಾಳಲಾರದೆ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.

ಬಸ್ ನಿಲ್ದಾಣವು ಸರಗೂರು ಪಟ್ಟಣದ ಕೇಂದ್ರ ಭಾಗದಲ್ಲಿಯೇ ಇದ್ದು, ಇದರ ಮುಂಭಾಗದಲ್ಲೇ ಪಟ್ಟಣ ಪಂಚಾಯಿತಿ ಇದ್ದರೂ ಇಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಸ್ವಚ್ಛತೆ ಕಾಪಾಡಲು ಕ್ರಮಕೈಗೊಳ್ಳಬೇಕಿದೆ.

-ಸಂಜಯ್, ಸರಗೂರು.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ಸಂಪನ್ನ: ಎ.ಈ.ರಘು ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…

36 mins ago

ಮಹದೇಶ್ವರ ಬೆಟ್ಟ| ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ…

44 mins ago

ತಮಿಳುನಾಡಿನಲ್ಲಿ ಕನ್ನಡ ಧ್ವಜ ಹಾಕದಂತೆ ಎಚ್ಚರಿಕೆ: ಶಬರಿಮಲೆಗೆ ಹೊರಟಿದ್ದ ವಾಹನ ತಡೆದು ದಬ್ಬಾಳಿಕೆ

ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕಿದ್ದ ವಾಹನಗಳನ್ನು ತಡೆದು ತಮಿಳು ಪುಂಡರು ಕನ್ನಡಿಗರ ಮೇಲೆ ದರ್ಪ ಮೆರೆದಿರುವ…

1 hour ago

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತೆ: ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಅಲ್ಲ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್‌…

1 hour ago

ಬೆಂಗಳೂರಿನಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ ಬಸ್‌

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ಇಂದು…

2 hours ago

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ ಗಾಮಿನಿ ಚೀತಾ

ಮಧ್ಯಪ್ರದೇಶ: ಇಲ್ಲಿನ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್‌…

2 hours ago