ಸರಗೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಪ್ರಯಾಣಿಕರಿಗೆ ಕಿರಿಕಿರಿಯಾಗುತ್ತಿದೆ. ಈ ನಿಲ್ದಾಣದ ಪಕ್ಕದಲ್ಲಿಯೇ ಕೊಳಚೆ ನೀರು, ಕಸದ ರಾಶಿಯೇ ಸಂಗ್ರಹವಾಗಿದ್ದು, ದುರ್ವಾಸನೆ ಬೀರುತ್ತಿದೆ. ಅಲ್ಲದೆ ಅಕ್ಕಪಕ್ಕದ ಅಂಗಡಿ ಮುಂಗಟ್ಟಿನವರೂ ಕಸವನ್ನು ಇಲ್ಲಿಯೇ ತಂದು ಬೀಸಾಡುತ್ತಿದ್ದಾರೆ. ಈಗ ಮಳೆಗಾಲವಾದ್ದರಿಂದ ಆ ಕೊಳಚೆ ನೀರು ಮಳೆ ನೀರಿನೊಂದಿಗೆ ನಿಲ್ದಾಣದ ಮುಂಭಾಗದಲ್ಲಿಯೇ ಹರಿಯುತ್ತಿದ್ದು, ಪ್ರಯಾಣಿಕರು ಬಸ್ ನಿಲ್ದಾಣಕ್ಕೆ ಬರಲು ಹರಸಾಹಸಪಡುವಂತಾಗಿದೆ.
ಈ ನಿಲ್ದಾಣಕ್ಕೆ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಬಂದು ಹೋಗುತ್ತಾರೆ. ಇಂತಹ ಜನನಿಬಿಡ ಪ್ರದೇಶದಲ್ಲಿನ ಅನೈರ್ಮಲ್ಯದ ವಾತಾವರಣದಿಂದಾಗಿ ಅವರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದ್ದು, ದುರ್ವಾಸನೆ ತಾಳಲಾರದೆ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.
ಬಸ್ ನಿಲ್ದಾಣವು ಸರಗೂರು ಪಟ್ಟಣದ ಕೇಂದ್ರ ಭಾಗದಲ್ಲಿಯೇ ಇದ್ದು, ಇದರ ಮುಂಭಾಗದಲ್ಲೇ ಪಟ್ಟಣ ಪಂಚಾಯಿತಿ ಇದ್ದರೂ ಇಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಸ್ವಚ್ಛತೆ ಕಾಪಾಡಲು ಕ್ರಮಕೈಗೊಳ್ಳಬೇಕಿದೆ.
-ಸಂಜಯ್, ಸರಗೂರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…