ಸರಗೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಪ್ರಯಾಣಿಕರಿಗೆ ಕಿರಿಕಿರಿಯಾಗುತ್ತಿದೆ. ಈ ನಿಲ್ದಾಣದ ಪಕ್ಕದಲ್ಲಿಯೇ ಕೊಳಚೆ ನೀರು, ಕಸದ ರಾಶಿಯೇ ಸಂಗ್ರಹವಾಗಿದ್ದು, ದುರ್ವಾಸನೆ ಬೀರುತ್ತಿದೆ. ಅಲ್ಲದೆ ಅಕ್ಕಪಕ್ಕದ ಅಂಗಡಿ ಮುಂಗಟ್ಟಿನವರೂ ಕಸವನ್ನು ಇಲ್ಲಿಯೇ ತಂದು ಬೀಸಾಡುತ್ತಿದ್ದಾರೆ. ಈಗ ಮಳೆಗಾಲವಾದ್ದರಿಂದ ಆ ಕೊಳಚೆ ನೀರು ಮಳೆ ನೀರಿನೊಂದಿಗೆ ನಿಲ್ದಾಣದ ಮುಂಭಾಗದಲ್ಲಿಯೇ ಹರಿಯುತ್ತಿದ್ದು, ಪ್ರಯಾಣಿಕರು ಬಸ್ ನಿಲ್ದಾಣಕ್ಕೆ ಬರಲು ಹರಸಾಹಸಪಡುವಂತಾಗಿದೆ.
ಈ ನಿಲ್ದಾಣಕ್ಕೆ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಬಂದು ಹೋಗುತ್ತಾರೆ. ಇಂತಹ ಜನನಿಬಿಡ ಪ್ರದೇಶದಲ್ಲಿನ ಅನೈರ್ಮಲ್ಯದ ವಾತಾವರಣದಿಂದಾಗಿ ಅವರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದ್ದು, ದುರ್ವಾಸನೆ ತಾಳಲಾರದೆ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.
ಬಸ್ ನಿಲ್ದಾಣವು ಸರಗೂರು ಪಟ್ಟಣದ ಕೇಂದ್ರ ಭಾಗದಲ್ಲಿಯೇ ಇದ್ದು, ಇದರ ಮುಂಭಾಗದಲ್ಲೇ ಪಟ್ಟಣ ಪಂಚಾಯಿತಿ ಇದ್ದರೂ ಇಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಸ್ವಚ್ಛತೆ ಕಾಪಾಡಲು ಕ್ರಮಕೈಗೊಳ್ಳಬೇಕಿದೆ.
-ಸಂಜಯ್, ಸರಗೂರು.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…