ಓದುಗರ ಪತ್ರ
ಸರಗೂರು ತಾಲ್ಲೂಕಿನ ನಂಜೀಪುರ, ಕಲ್ಲಂಬಾಳು, ಕಟ್ಟೆಹುಣಸೂರು, ಕುಂದೂರು, ದಡದಹಳ್ಳಿ ಮತ್ತು ಕಡಜೆಟ್ಟಿ ಮುಂತಾದ ಗ್ರಾಮಗಳ ನಡುವೆ ವರ್ಷಪೂರ್ತಿ ಹರಿಯುವ ನುಗು ಹೊಳೆಗೆ ಅಡ್ಡಲಾಗಿ ಕೆಳದರ್ಜೆಯ ಚಿಕ್ಕ ಸೇತುವೆ ನಿರ್ಮಿಸಲಾಗಿದ್ದು, ಅಲ್ಪಸ್ವಲ್ಪ ಮಳೆಯಾದರೂ ಸೇತುವೆ ಮುಳುಗಡೆಯಾಗಿ ಅಕ್ಕ ಪಕ್ಕದಲ್ಲಿರುವ ಜಮೀನುಗಳಿಗೆ ನೀರು ನುಗ್ಗಿ ಬೆಳೆ ನಷ್ಟವಾಗುತ್ತಿದೆ.
ಅಲ್ಲದೇ ಗ್ರಾಮಗಳು ಸಂಪರ್ಕವನ್ನೇ ಕಳೆದುಕೊಳ್ಳುತ್ತವೆ. ಹಲಸೂರು ಕಟ್ಟೆ ಮತ್ತು ನುಗು ಜಲಾಶಯದಿಂದ ನೀರಿನ ಹೊರ ಹರಿವಿನ ಪ್ರಮಾಣವನ್ನು ಹೆಚ್ಚಿಸಿದರೆ ಸೇತುವೆ ಮುಳುಗಡೆಯಾಗಿ ಜನ ಜೀವನ ಅಸ್ತವ್ಯಸ್ತವಾಗುತ್ತದೆ. ಸೇತುವೆ ಮುಳುಗಡೆಯಾದರೆ ಈ ಭಾಗದ ವಿದ್ಯಾರ್ಥಿಗಳು ಹುಲ್ಲಹಳ್ಳಿಯಲ್ಲಿರುವ ಶಾಲೆಗಳಿಗೆ ತೆರಳಲು ಸಾಧ್ಯವಾಗುವುದಿಲ್ಲ. ಈ ಗ್ರಾಮಗಳಿಗೆಲ್ಲ ಈ ಸೇತುವೆಯೇ ಸಂಪರ್ಕ ಕೊಂಡಿಯಾಗಿದ್ದು, ವಿದ್ಯಾರ್ಥಿಗಳು, ವ್ಯಾಪಾರಸ್ಥರು, ಕೂಲಿ ಕಾರ್ಮಿಕರು, ಸಾರ್ವಜನಿಕರು, ವಾಹನ ಸವಾರರು ಹಾಗೂ ರೈತರ ದಿನನಿತ್ಯದ ಕೃಷಿ ಚಟುವಟಿಕೆಗಳಿಗೆ ಅನನುಕೂಲವಾಗಿದೆ.
ಈ ಸೇತುವೆ ಸಂಪರ್ಕಕ್ಕೆ ಇರುವ ರಸ್ತೆಗಳು ಕೂಡ ಮಳೆಗಾಲದಲ್ಲಿ ಕೆಸರುಮಯವಾಗಿದ್ದು, ಅದೆಷ್ಟೋ ವಾಹನ ಸವಾರರು ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಸಂಬಂಧಪಟ್ಟವರು ಕೂಡಲೇ ಈ ಸೇತುವೆಯನ್ನು ಮೇಲ್ದರ್ಜೆಗೇರಿಸುವುದರೊಂದಿಗೆ ಸಂಪರ್ಕ ರಸ್ತೆಗಳನ್ನು ದುರಸ್ತಿ ಮಾಡುವ ಮೂಲಕ ಗ್ರಾಮಸ್ಥರ ಸಮಸ್ಯೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಪರಶಿವಮೂರ್ತಿ ಎನ್.ಪಿ. , ನಂಜೀಪುರ, ಸರಗೂರು ತಾ
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…