Andolana originals

ಓದುಗರ ಪತ್ರ: ಸೇತುವೆಯನ್ನು ಮೇಲ್ದರ್ಜೆಗೇರಿಸಿ

ಸರಗೂರು ತಾಲ್ಲೂಕಿನ ನಂಜೀಪುರ, ಕಲ್ಲಂಬಾಳು, ಕಟ್ಟೆಹುಣಸೂರು, ಕುಂದೂರು, ದಡದಹಳ್ಳಿ ಮತ್ತು ಕಡಜೆಟ್ಟಿ ಮುಂತಾದ ಗ್ರಾಮಗಳ ನಡುವೆ ವರ್ಷಪೂರ್ತಿ ಹರಿಯುವ ನುಗು ಹೊಳೆಗೆ ಅಡ್ಡಲಾಗಿ ಕೆಳದರ್ಜೆಯ ಚಿಕ್ಕ ಸೇತುವೆ ನಿರ್ಮಿಸಲಾಗಿದ್ದು, ಅಲ್ಪಸ್ವಲ್ಪ ಮಳೆಯಾದರೂ ಸೇತುವೆ ಮುಳುಗಡೆಯಾಗಿ ಅಕ್ಕ ಪಕ್ಕದಲ್ಲಿರುವ ಜಮೀನುಗಳಿಗೆ ನೀರು ನುಗ್ಗಿ ಬೆಳೆ ನಷ್ಟವಾಗುತ್ತಿದೆ.

ಅಲ್ಲದೇ ಗ್ರಾಮಗಳು ಸಂಪರ್ಕವನ್ನೇ ಕಳೆದುಕೊಳ್ಳುತ್ತವೆ. ಹಲಸೂರು ಕಟ್ಟೆ ಮತ್ತು ನುಗು ಜಲಾಶಯದಿಂದ ನೀರಿನ ಹೊರ ಹರಿವಿನ ಪ್ರಮಾಣವನ್ನು ಹೆಚ್ಚಿಸಿದರೆ ಸೇತುವೆ ಮುಳುಗಡೆಯಾಗಿ ಜನ ಜೀವನ ಅಸ್ತವ್ಯಸ್ತವಾಗುತ್ತದೆ. ಸೇತುವೆ ಮುಳುಗಡೆಯಾದರೆ ಈ ಭಾಗದ ವಿದ್ಯಾರ್ಥಿಗಳು ಹುಲ್ಲಹಳ್ಳಿಯಲ್ಲಿರುವ ಶಾಲೆಗಳಿಗೆ ತೆರಳಲು ಸಾಧ್ಯವಾಗುವುದಿಲ್ಲ. ಈ ಗ್ರಾಮಗಳಿಗೆಲ್ಲ ಈ ಸೇತುವೆಯೇ ಸಂಪರ್ಕ ಕೊಂಡಿಯಾಗಿದ್ದು, ವಿದ್ಯಾರ್ಥಿಗಳು, ವ್ಯಾಪಾರಸ್ಥರು, ಕೂಲಿ ಕಾರ್ಮಿಕರು, ಸಾರ್ವಜನಿಕರು, ವಾಹನ ಸವಾರರು ಹಾಗೂ ರೈತರ ದಿನನಿತ್ಯದ ಕೃಷಿ ಚಟುವಟಿಕೆಗಳಿಗೆ ಅನನುಕೂಲವಾಗಿದೆ.

ಈ ಸೇತುವೆ ಸಂಪರ್ಕಕ್ಕೆ ಇರುವ ರಸ್ತೆಗಳು ಕೂಡ ಮಳೆಗಾಲದಲ್ಲಿ ಕೆಸರುಮಯವಾಗಿದ್ದು, ಅದೆಷ್ಟೋ ವಾಹನ ಸವಾರರು ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಸಂಬಂಧಪಟ್ಟವರು ಕೂಡಲೇ ಈ ಸೇತುವೆಯನ್ನು ಮೇಲ್ದರ್ಜೆಗೇರಿಸುವುದರೊಂದಿಗೆ ಸಂಪರ್ಕ ರಸ್ತೆಗಳನ್ನು ದುರಸ್ತಿ ಮಾಡುವ ಮೂಲಕ ಗ್ರಾಮಸ್ಥರ ಸಮಸ್ಯೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.

– ಪರಶಿವಮೂರ್ತಿ ಎನ್.ಪಿ. , ನಂಜೀಪುರ, ಸರಗೂರು ತಾ

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

5 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

5 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

6 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

11 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

11 hours ago