Andolana originals

ಓದುಗರ ಪತ್ರ: ಸೇತುವೆಯನ್ನು ಮೇಲ್ದರ್ಜೆಗೇರಿಸಿ

ಸರಗೂರು ತಾಲ್ಲೂಕಿನ ನಂಜೀಪುರ, ಕಲ್ಲಂಬಾಳು, ಕಟ್ಟೆಹುಣಸೂರು, ಕುಂದೂರು, ದಡದಹಳ್ಳಿ ಮತ್ತು ಕಡಜೆಟ್ಟಿ ಮುಂತಾದ ಗ್ರಾಮಗಳ ನಡುವೆ ವರ್ಷಪೂರ್ತಿ ಹರಿಯುವ ನುಗು ಹೊಳೆಗೆ ಅಡ್ಡಲಾಗಿ ಕೆಳದರ್ಜೆಯ ಚಿಕ್ಕ ಸೇತುವೆ ನಿರ್ಮಿಸಲಾಗಿದ್ದು, ಅಲ್ಪಸ್ವಲ್ಪ ಮಳೆಯಾದರೂ ಸೇತುವೆ ಮುಳುಗಡೆಯಾಗಿ ಅಕ್ಕ ಪಕ್ಕದಲ್ಲಿರುವ ಜಮೀನುಗಳಿಗೆ ನೀರು ನುಗ್ಗಿ ಬೆಳೆ ನಷ್ಟವಾಗುತ್ತಿದೆ.

ಅಲ್ಲದೇ ಗ್ರಾಮಗಳು ಸಂಪರ್ಕವನ್ನೇ ಕಳೆದುಕೊಳ್ಳುತ್ತವೆ. ಹಲಸೂರು ಕಟ್ಟೆ ಮತ್ತು ನುಗು ಜಲಾಶಯದಿಂದ ನೀರಿನ ಹೊರ ಹರಿವಿನ ಪ್ರಮಾಣವನ್ನು ಹೆಚ್ಚಿಸಿದರೆ ಸೇತುವೆ ಮುಳುಗಡೆಯಾಗಿ ಜನ ಜೀವನ ಅಸ್ತವ್ಯಸ್ತವಾಗುತ್ತದೆ. ಸೇತುವೆ ಮುಳುಗಡೆಯಾದರೆ ಈ ಭಾಗದ ವಿದ್ಯಾರ್ಥಿಗಳು ಹುಲ್ಲಹಳ್ಳಿಯಲ್ಲಿರುವ ಶಾಲೆಗಳಿಗೆ ತೆರಳಲು ಸಾಧ್ಯವಾಗುವುದಿಲ್ಲ. ಈ ಗ್ರಾಮಗಳಿಗೆಲ್ಲ ಈ ಸೇತುವೆಯೇ ಸಂಪರ್ಕ ಕೊಂಡಿಯಾಗಿದ್ದು, ವಿದ್ಯಾರ್ಥಿಗಳು, ವ್ಯಾಪಾರಸ್ಥರು, ಕೂಲಿ ಕಾರ್ಮಿಕರು, ಸಾರ್ವಜನಿಕರು, ವಾಹನ ಸವಾರರು ಹಾಗೂ ರೈತರ ದಿನನಿತ್ಯದ ಕೃಷಿ ಚಟುವಟಿಕೆಗಳಿಗೆ ಅನನುಕೂಲವಾಗಿದೆ.

ಈ ಸೇತುವೆ ಸಂಪರ್ಕಕ್ಕೆ ಇರುವ ರಸ್ತೆಗಳು ಕೂಡ ಮಳೆಗಾಲದಲ್ಲಿ ಕೆಸರುಮಯವಾಗಿದ್ದು, ಅದೆಷ್ಟೋ ವಾಹನ ಸವಾರರು ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಸಂಬಂಧಪಟ್ಟವರು ಕೂಡಲೇ ಈ ಸೇತುವೆಯನ್ನು ಮೇಲ್ದರ್ಜೆಗೇರಿಸುವುದರೊಂದಿಗೆ ಸಂಪರ್ಕ ರಸ್ತೆಗಳನ್ನು ದುರಸ್ತಿ ಮಾಡುವ ಮೂಲಕ ಗ್ರಾಮಸ್ಥರ ಸಮಸ್ಯೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.

– ಪರಶಿವಮೂರ್ತಿ ಎನ್.ಪಿ. , ನಂಜೀಪುರ, ಸರಗೂರು ತಾ

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

9 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

9 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

9 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

9 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

9 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

9 hours ago