Andolana originals

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ ಮೊಬೈಲ್ ಮೂಲಕ ಕ್ಷಣಾರ್ಧದಲ್ಲಿ ವಹಿವಾಟು ನಡೆಸುವ ಸೌಲಭ್ಯವಿದೆ. ಆದರೆ ೨ ಸಾವಿರ ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ ಮೇಲೆ ಶೇ. ೦.೪ರಷ್ಟು ಎಂಡಿಆರ್ ಶುಲ್ಕ ವಿಧಿಸುವ ನಿಯಮವು ಸಾರ್ವಜನಿಕರಲ್ಲಿ, ವಿಶೇಷವಾಗಿ ಗ್ರಾಹಕರು ಮತ್ತು ಸಣ್ಣ ವರ್ತಕರಲ್ಲಿ ಸಾಕಷ್ಟು ಗೊಂದಲ ಹಾಗೂ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಇದರ ಸಾಧಕ-ಬಾಧಕಗಳ ಕುರಿತು ಸರ್ಕಾರದಿಂದ ಸ್ಪಷ್ಟನೆ ಅಗತ್ಯವಾಗಿದೆ.

ಸಾಮಾನ್ಯ ಗ್ರಾಹಕರ ದೃಷ್ಟಿಯಿಂದ ನೋಡಿದರೆ, ಬ್ಯಾಂಕ್ ಖಾತೆಯಿಂದ ನೇರವಾಗಿ ಇನ್ನೊಂದು ಬ್ಯಾಂಕ್ ಖಾತೆಗೆ ಮಾಡುವ ಯುಪಿಐ ವಹಿವಾಟುಗಳಿಗೆ ಯಾವುದೇ ಶುಲ್ಕವಿಲ್ಲದಿರುವುದು ಸಮಾಧಾನಕರ ವಿಷಯ. ಆದರೆ ೨ ಸಾವಿರ ರೂ.ಗಿಂತ ಹೆಚ್ಚಿನ ಮೌಲ್ಯದ ವಹಿವಾಟುಗಳ ಮೇಲೆ ವಿಧಿಸಲಾಗುವ ಶುಲ್ಕವು ಸಣ್ಣ ಮತ್ತು ಮಧ್ಯಮ ಪ್ರಮಾಣದ ವರ್ತಕರಮ ಲಾಭದ ಪ್ರಮಾಣವನ್ನು ಕುಗ್ಗಿಸುತ್ತದೆ. ಇದರಿಂದಾಗಿ ಕೆಲವು ಸಣ್ಣ ವ್ಯಾಪಾರಿಗಳು ಯುಪಿಐ ಪಾವತಿ ಸ್ವೀಕರಿಸಲು ಹಿಂಜರಿಯಬಹುದು ಅಥವಾ ಮತ್ತೆ ನಗದು ವ್ಯವಹಾರದತ್ತ ಮುಖ ಮಾಡಿ ಚಿಲ್ಲರೆ ಸಮಸ್ಯೆ ಉಂಟಾಗಬಹುದು.

ಭಾರತವನ್ನು ‘ನಗದು ರಹಿತ ಆರ್ಥಿಕತೆ’ಯತ್ತ ಕೊಂಡೊಯ್ಯುವ ಹಾದಿಯಲ್ಲಿ ಇಂತಹ ಶುಲ್ಕಗಳು ಹಿನ್ನಡೆಯನ್ನು ಉಂಟುಮಾಡಬಹುದು ಎಂಬ ಆತಂಕವೂ ಕಾಡುತ್ತಿದೆ. ಬ್ಯಾಂಕಿನಿಂದ ಬ್ಯಾಂಕ್‌ಗೆ ಮಾಡುವ ಸಾಮಾನ್ಯ ಯುಪಿಐ ಉಚಿತ ಎಂಬುದನ್ನು ಸರ್ಕಾರ ಮತ್ತು ಬ್ಯಾಂಕುಗಳು ಪ್ರಚಾರ ಮಾಡಬೇಕಿದೆ. ಹಾಗೆಯೇ, ಸಣ್ಣ ವರ್ತಕರಿಗೆ ಶೋಷಣೆಯಾಗದಂತೆ ಸೂಕ್ತ ರಕ್ಷಣೆ ನೀಡುವುದು ಹಾಗೂ ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯ.

ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

23 mins ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

25 mins ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

27 mins ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

31 mins ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

37 mins ago

ಮ.ಬೆಟ್ಟದಲ್ಲಿವೆ ೪೩ ಅನಧಿಕೃತ ವಸತಿಗೃಹಗಳು!

ಮಹಾದೇಶ್ ಎಂ.ಗೌಡ ಗ್ರಾಮ ಪಂಚಾಯಿತಿಗೆ ವಾರ್ಷಿಕ ೧೨ ರಿಂದ ೧೫ ಲಕ್ಷ ರೂ.ನಷ್ಟ; ಕ್ರಮಕ್ಕೆ ಸಾರ್ವಜನಿಕರ ಆಗ್ರಹ ಹನೂರು: ತಾಲ್ಲೂಕಿನ…

44 mins ago