ಓದುಗರ ಪತ್ರ
ನ್ಯಾಯಾಲಯದಲ್ಲಿ ಕಡತಗಳ ಪುಟಗಳನ್ನು ತಿರುಗಿಸಲು ಕೆಲವು ಸಿಬ್ಬಂದಿ ಎಂಜಲನ್ನು ಬಳಸುತ್ತಾರೆ. ಅದರಲ್ಲೂ ಪಾನ್ ಮಸಾಲ ಅಥವಾ ಎಲೆ ಅಡಕೆ ಉಪಯೋಗಿಸುವವರು ಹೀಗೆ ಮಾಡುವುದರಿಂದ ಹಾಳೆಯ ಮೇಲೆ ಕೆಂಪು ಕಲೆಗಳಾಗುತ್ತವೆ. ಇದರಿಂದ ಸೋಂಕು ಹರಡುವ ಭೀತಿಯುಂಟಾಗಿದೆ.
ಕೆಎಸ್ಆರ್ಟಿಸಿ ಬಸ್ಗಳಲ್ಲಿ ಕಂಡಕ್ಟರ್ಗಳು ಹಣ ಎಣಿಸುವ ವೇಳೆ ಎಂಜಲು ಬಳಸುವುದು ಸಾಮಾನ್ಯ ಎನ್ನುವಂತಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಕೂಡ ಹಾಳೆಗಳನ್ನು ತಿರುವಿ ಹಾಕಲು ಎಂಜಲು ಅದ್ದುವುದು ಮುಂದುವರಿದೇ ಇದೆ. ಇದೊಂದು ಕೆಟ್ಟ ಅಭ್ಯಾಸವಾಗಿದೆ. ಕರ್ನಾಟಕ ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿ ಹಾಳೆ ತಿರುಗಿಸಲು ಎಂಜಲು ಅದ್ದುವುದನ್ನು ನಿಷೇಧಿಸಬೇಕು. ಅಗತ್ಯವಿದ್ದರೆ ಸ್ಟೇಷನರಿ ಅಂಗಡಿಗಳಲ್ಲಿ ದೊರೆಯುವ ಸ್ಪಾಂಜ್ ಕಪ್ಗಳನ್ನು ತಂದು ಉಪಯೋಗಿಸಬೇಕು. ಇಲ್ಲವೇ ಯಾವುದಾದರೂ ಮುಚ್ಚಳ, ಬಟ್ಟಲಿನಲ್ಲಿ ಹತ್ತಿ,/ಬಟ್ಟೆ ಇಟ್ಟುಕೊಂಡು ನೀರು ಹಾಕಿ ಸ್ಪಾಂಜ್ ರೀತಿ ಉಪಯೋಗಿಸಬಹುದು.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…