Andolana originals

ಓದುಗರ ಪತ್ರ: ಸರ್ಕಾರಿ ಕಚೇರಿಗಳಲ್ಲಿ ಸ್ಪಾಂಜ್ ಕಪ್ ಉಪಯೋಗಿಸಿ

ನ್ಯಾಯಾಲಯದಲ್ಲಿ ಕಡತಗಳ ಪುಟಗಳನ್ನು ತಿರುಗಿಸಲು ಕೆಲವು ಸಿಬ್ಬಂದಿ ಎಂಜಲನ್ನು ಬಳಸುತ್ತಾರೆ. ಅದರಲ್ಲೂ ಪಾನ್ ಮಸಾಲ ಅಥವಾ ಎಲೆ ಅಡಕೆ ಉಪಯೋಗಿಸುವವರು ಹೀಗೆ ಮಾಡುವುದರಿಂದ ಹಾಳೆಯ ಮೇಲೆ ಕೆಂಪು ಕಲೆಗಳಾಗುತ್ತವೆ. ಇದರಿಂದ ಸೋಂಕು ಹರಡುವ ಭೀತಿಯುಂಟಾಗಿದೆ.

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಕಂಡಕ್ಟರ್‌ಗಳು ಹಣ ಎಣಿಸುವ ವೇಳೆ ಎಂಜಲು ಬಳಸುವುದು ಸಾಮಾನ್ಯ ಎನ್ನುವಂತಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಕೂಡ ಹಾಳೆಗಳನ್ನು ತಿರುವಿ ಹಾಕಲು ಎಂಜಲು ಅದ್ದುವುದು ಮುಂದುವರಿದೇ ಇದೆ. ಇದೊಂದು ಕೆಟ್ಟ ಅಭ್ಯಾಸವಾಗಿದೆ. ಕರ್ನಾಟಕ ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿ ಹಾಳೆ ತಿರುಗಿಸಲು ಎಂಜಲು ಅದ್ದುವುದನ್ನು ನಿಷೇಧಿಸಬೇಕು. ಅಗತ್ಯವಿದ್ದರೆ ಸ್ಟೇಷನರಿ ಅಂಗಡಿಗಳಲ್ಲಿ ದೊರೆಯುವ ಸ್ಪಾಂಜ್ ಕಪ್‌ಗಳನ್ನು ತಂದು ಉಪಯೋಗಿಸಬೇಕು. ಇಲ್ಲವೇ ಯಾವುದಾದರೂ ಮುಚ್ಚಳ, ಬಟ್ಟಲಿನಲ್ಲಿ ಹತ್ತಿ,/ಬಟ್ಟೆ ಇಟ್ಟುಕೊಂಡು ನೀರು ಹಾಕಿ ಸ್ಪಾಂಜ್ ರೀತಿ ಉಪಯೋಗಿಸಬಹುದು.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago