Andolana originals

ಓದುಗರ ಪತ್ರ: ಸರ್ಕಾರಿ ಕಚೇರಿಗಳಲ್ಲಿ ಸ್ಪಾಂಜ್ ಕಪ್ ಉಪಯೋಗಿಸಿ

ನ್ಯಾಯಾಲಯದಲ್ಲಿ ಕಡತಗಳ ಪುಟಗಳನ್ನು ತಿರುಗಿಸಲು ಕೆಲವು ಸಿಬ್ಬಂದಿ ಎಂಜಲನ್ನು ಬಳಸುತ್ತಾರೆ. ಅದರಲ್ಲೂ ಪಾನ್ ಮಸಾಲ ಅಥವಾ ಎಲೆ ಅಡಕೆ ಉಪಯೋಗಿಸುವವರು ಹೀಗೆ ಮಾಡುವುದರಿಂದ ಹಾಳೆಯ ಮೇಲೆ ಕೆಂಪು ಕಲೆಗಳಾಗುತ್ತವೆ. ಇದರಿಂದ ಸೋಂಕು ಹರಡುವ ಭೀತಿಯುಂಟಾಗಿದೆ.

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಕಂಡಕ್ಟರ್‌ಗಳು ಹಣ ಎಣಿಸುವ ವೇಳೆ ಎಂಜಲು ಬಳಸುವುದು ಸಾಮಾನ್ಯ ಎನ್ನುವಂತಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಕೂಡ ಹಾಳೆಗಳನ್ನು ತಿರುವಿ ಹಾಕಲು ಎಂಜಲು ಅದ್ದುವುದು ಮುಂದುವರಿದೇ ಇದೆ. ಇದೊಂದು ಕೆಟ್ಟ ಅಭ್ಯಾಸವಾಗಿದೆ. ಕರ್ನಾಟಕ ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿ ಹಾಳೆ ತಿರುಗಿಸಲು ಎಂಜಲು ಅದ್ದುವುದನ್ನು ನಿಷೇಧಿಸಬೇಕು. ಅಗತ್ಯವಿದ್ದರೆ ಸ್ಟೇಷನರಿ ಅಂಗಡಿಗಳಲ್ಲಿ ದೊರೆಯುವ ಸ್ಪಾಂಜ್ ಕಪ್‌ಗಳನ್ನು ತಂದು ಉಪಯೋಗಿಸಬೇಕು. ಇಲ್ಲವೇ ಯಾವುದಾದರೂ ಮುಚ್ಚಳ, ಬಟ್ಟಲಿನಲ್ಲಿ ಹತ್ತಿ,/ಬಟ್ಟೆ ಇಟ್ಟುಕೊಂಡು ನೀರು ಹಾಕಿ ಸ್ಪಾಂಜ್ ರೀತಿ ಉಪಯೋಗಿಸಬಹುದು.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago